Advertisement

Gundlupete: ಇಬ್ಬರು ಪುಟ್ಟ ಮಕ್ಕಳೊಡನೆ ನೇಣಿಗೆ ಶರಣಾದ ಮಹಿಳೆ

10:04 PM Mar 03, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ತಾಯಿಯೊಬ್ಬಳು ತನ್ನ ಎರಡು ಮಕ್ಕಳ ಜತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ.

Advertisement

ಹೊರೆಯಾಲ ಗ್ರಾಮದ ಜ್ಯೋತಿ(28), ಮಕ್ಕಳಾದ ಭಾಂಧವ್ಯ(7), ಮಾನಸ(3) ಮೃತ ದುರ್ದೈವಿಗಳು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ನಿಖರ ಕಾರಣ ತಿಳಿದು ಬಂದಿಲ್ಲ.

ಹೊರೆಯಾಲದ ಯೋಗೇಶ್ ಹಾಗೂ ನಂಜನಗೂಡು ತಾಲೂಕಿನ ಕೊಣನೂರು ಗ್ರಾಮದ ಜ್ಯೋತಿಗೆ ಕಳೆದ 10 ವರ್ಷದ ಹಿಂದೆ ವಿವಾಹವಾಗಿದ್ದರು. ಆದರೆ ಭಾನುವಾರ ಜ್ಯೋತಿ ತನ್ನ ಎರಡು ಮಕ್ಕಳೊಡನೆ ನೇಣಿಗೆ ಶರಣಾಗಿರುವುದು ಕುಟುಂಬಸ್ಥರಲ್ಲಿ ದಿಗ್ಬ್ರಮೆ ಮೂಡಿಸಿದೆ. ಸದ್ಯ ಬೇಗೂರು ಠಾಣೆ ಪೊಲೀಸರು ಗ್ರಾಮಕ್ಕೆ ತೆರಳಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next