Advertisement

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

09:11 PM Apr 19, 2021 | Team Udayavani |

ಸುಬ್ರಹ್ಮಣ್ಯ; ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿ ಗುಂಡ್ಯ ಹೊಳೆಯಲ್ಲಿ ಸಂಭವಿಸಿದೆ.

Advertisement

ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ (19ವ.)ಎಂದು ಗುರುತಿಸಲಾಗಿದೆ.

ಈ ಇರ್ವರು ಯುವಕರು ಸ್ನಾನಕ್ಕೆಂದು ನೂಜಿಬಾಳ್ತಿಲ ಗ್ರಾಮದ ಇಚಿಲಂಪಾಡಿ ಸೇತುವೆ ಸಮೀಪ ಗುಂಡ್ಯ ಹೊಳೆಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳೀಯರ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಎ.ಎಸ್.ಐ ರವಿ, ಸುರೇಶ್, ಚಂದ್ರಶೇಖರ್ ಮತ್ತು ಹೆಡ್ ಕಾನ್ಸ್ಟೇಬಲ್ ನೇತ್ರ ಕುಮಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಲಾಕ್‌ಡೌನ್‌ ವದಂತಿ: ಗಂಗಾವತಿಯಲ್ಲಿ ಅಗತ್ಯ ವಸ್ತುಗಳ ದರ ದುಪ್ಪಟ್ಟು

Advertisement
Advertisement

Udayavani is now on Telegram. Click here to join our channel and stay updated with the latest news.

Next