Advertisement

ಗುರುಮಠಕಲ್‌ ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಕೂರ್ಮಾರಾವ್‌ ಗರಂ

01:01 PM Jun 16, 2020 | Suhan S |

ಗುರುಮಠಕಲ್‌: ಪಟ್ಟಣದ ಸರಕಾರಿ ಆಸ್ಪತ್ರೆ ಅವ್ಯವಸ್ಥೆ ಕಂಡು ಜಿಲ್ಲಾಧಿಕಾರಿ ಕೂರ್ಮಾರಾವ್‌ ಗರಂ ಆದರು. ಕಂದಕೂರು ಗ್ರಾಮದ ಕ್ವಾರಂಟೈನ್‌ ಕೇಂದ್ರಕ್ಕೆ ಭೇಟಿ ನೀಡಿದರು. ಬಳಿಕ ಪಟ್ಟಣದ ಸರಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಇದೊಂದು ಭೂತ ಬಂಗಾಲೆಯಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ವಿರುದ್ಧ ಗರಂ ಆದರು.

Advertisement

ಬೃಹತ್‌ ಕಟ್ಟಡ ಹೊಂದಿರುವ ಆಸ್ಪತ್ರೆಯನ್ನು ಉತ್ತಮವಾಗಿ ನಿರ್ವಹಣೆ ಮಾಡುವುದರಲ್ಲಿ ವಿಫಲವಾಗಿದ್ದೀರಿ. ಕೊಠಡಿಗಳು ಸಹ ಸ್ವತ್ಛವಾಗಿಲ್ಲ. ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಸ್ಪತ್ರೆ ಜನರಿಗೆ ಭಯ ಉಂಟುಮಾಡಬಾರದು. ಇನ್ನು ಮುಂದೆ ಸುಧಾರಣೆಗೆ ಒತ್ತು ನೀಡಬೇಕು ಎಂದು ಸೂಚಿಸಿದರು. ತಹಶೀಲ್ದಾರ್‌ ಸಂಗಮೇಶ ಜಿಡಗಿ, ಪಿಎಸ್‌ಐ ಶೀಲಾದೇವಿ, ಪುರಸಭೆ ಮುಖ್ಯಾಧಿಕಾರಿ ಜೀವನಕುಮಾರ ಕಟ್ಟಿಮನಿ, ತಾಲೂಕು ಆರೋಗ್ಯ ಅಧಿಕಾರಿ ಹಣ್ಮಿರೆಡ್ಡಿ, ಡಾ| ವರಶಿವಪ್ರಸಾದ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next