Advertisement

ಕೋವಿಡ್‌ ತಡೆಗೆ ಸಹಕರಿಸಿ: ಜಿಡಿಗೆ

06:04 PM Jun 12, 2020 | Naveen |

ಗುರುಮಠಕಲ್‌: ತಾಲೂಕಿನಲ್ಲಿ ಕೋವಿಡ್ ಮಹಾಮಾರಿ ತಾಂಡವವಾಡುತ್ತಿದ್ದು, ಇದರ ತಡೆಗೆ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಎಲ್ಲರೂ ಸಹಕರಿಸಬೇಕು ಎಂದು ತಹಶೀಲ್ದಾರ್‌ ಸಂಗಮೇಶ ಜಿಡಿಗೆ ಹೇಳಿದರು.

Advertisement

ಪುರಸಭೆ ಸಭಾಂಗಣದಲ್ಲಿ ಕೋವಿಡ್ ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ನಡೆಸಿದ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪುರಸಭೆ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಕ್ವಾರಂಟೈನ್‌ ಅವಧಿ ಮುಗಿಸಿದವರು ವರದಿ ಬರುವ ಮುನ್ನವೇ ತಮ್ಮ ಹಳ್ಳಿ, ತಾಂಡಾಕ್ಕೆ ತೆರಳಿದ್ದಾರೆ. ಅವರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದ್ದು, ಅವರ ಮೇಲೆ ನಿಗಾ ವಹಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next