Advertisement

ಗುರುಪುರ: ಶೌಚಾಲಯದ ಗುಂಡಿ ತೆಗೆಯುವಾಗ ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ

09:20 PM Dec 13, 2022 | Team Udayavani |

ಬಜಪೆ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಅಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯೊಂದರ ಶೌಚಾಲಯದ ಗುಂಡಿ ತೋಡುತ್ತಿದ್ದಾಗ ಮಣ್ಣು ಕುಸಿದು ಸ್ಥಳೀಯರಾದ ಆದಂ (63) ಎಂಬುವರು ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ.

Advertisement

ಮಂಗಳವಾರ ಸಂಜೆ 3.30ರಿಂದ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಒಟ್ಟು ಮೂರು ಜನ ಶೌಚಾಲಯದ ಗುಂಡಿ ತೋಡುವ ಕೆಲಸ ಮಾಡುತ್ತಿದ್ದರು. ಸುಮಾರು ಏಳೆಂಟು ಅಡಿ ಗುಂಡಿ ತೋಡಲಾಗಿದ್ದು, ಈ ವೇಳೆ ಮೇಲ್ಭಾಗದಲ್ಲಿ ಮಣ್ಣು ಸಡಿಲಗೊಂಡು ಹಠಾತ್ ಜರಿದು ಬಿದ್ದಿದೆ. ಪರಿಣಾಮ ಆದಂ ಅವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡು ಮೃತರಾಗಿದ್ದಾರೆ. ಇತರ ಇಬ್ಬರು ಕಾರ್ಮಿಕರಾದ ಇಬ್ರಾಹಿಂ ಮತ್ತು ಇಮ್ತಿಯಾಜ್ ಎನ್ನುವವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮನೆ ಅಂಗಳದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ… ಜೀವ ಭಯದಲ್ಲಿ ಗ್ರಾಮಸ್ಥರು

Advertisement

Udayavani is now on Telegram. Click here to join our channel and stay updated with the latest news.

Next