Advertisement

Gurupura ಅಪಘಾತ ಪ್ರಕರಣ: ಬಸ್‌ ತಡೆದು ಸ್ಥಳೀಯರ ಪ್ರತಿಭಟನೆ

10:37 AM Jun 23, 2023 | Team Udayavani |

ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂ.22ರ ಗುರುವಾರ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಜೂ.23ರ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ನಿನ್ನೆ ಅಪಘಾತದಲ್ಲಿ ಮೃತಪಟ್ಟಿದ್ದರು.

ಪ್ರತಿಭಟನೆ ಹಿನ್ನೆಯಲ್ಲಿ ಕೈಕಂಬ ಜಂಕ್ಷನ್ ಸಂಪೂರ್ಣ ಬ್ಲಾಕ್ ಆಗಿದೆ. ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತು ಕತೆ ನಡೆಸುತ್ತಿದ್ದಾರೆ.

ಬಸ್ ಗಳನ್ನು ಸ್ಥಳದಿಂದ ತೆರಳಲು ಬಿಡದ ಹಿನ್ನೆಲೆಯಲ್ಲಿ ಸಾಲಾಗಿ ನಿಂತಿದ್ದು, ಮೂಡುಬಿದಿರೆ- ಮಂಗಳೂರು, ಬಜಪೆ, ಪೊಳಲಿ ಬಿಸಿರೋಡ್ ಮೊದಲಾದೆಡೆಗೆ ತೆರಳುವ ಪಯಾಣಿಕರು ಬಸ್ ನಲ್ಲೇ ಬಾಕಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next