Advertisement

ಗುರುರಾಜ್‌ಗೆ ಏಕಲವ್ಯ ಪ್ರಶಸ್ತಿ ಪ್ರದಾನ

06:00 AM Apr 21, 2018 | |

ಕುಂದಾಪುರ: ವೇಟ್‌ಲಿಫ್ಟರ್‌, ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತ ಕುಂದಾಪುರದ ಗುರುರಾಜ್‌ ಅವರಿಗೆ ಗುರುವಾರ ರಾತ್ರಿ ಅವರ ಚಿತ್ತೂರಿನ ಮನೆಯಲ್ಲಿಯೇ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಅವರು ಏಕಲವ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 

Advertisement

ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ಪ.ಪೂ. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸುಕೇಶ್‌ ಶೆಟ್ಟಿ, ಗುರುರಾಜ್‌ ತಂದೆ ಮಹಾಬಲ ಪೂಜಾರಿ ಉಪಸ್ಥಿತರಿದ್ದರು. ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದಿತ್ತ ಗುರುರಾಜ್‌ ಅವರು ಗುರುವಾರಷ್ಟೇ ಹುಟ್ಟೂರಿಗೆ ಆಗಮಿಸಿದ್ದರು. 

ಮಾ. 7ರಂದು ಬೆಂಗಳೂರಿನಲ್ಲಿ 2016ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದರೂ, ಆಗ ಗುರುರಾಜ್‌ ಪಂಜಾಬ್‌ನ ಪಟಿಯಾಲದಲ್ಲಿ ಅಭ್ಯಾಸ ನಡೆಸುತ್ತಿದ್ದುರಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next