Advertisement

ಪ್ರೋತ್ಸಾಹ ಧನಕ್ಕಾಗಿ ಸಿಎಂ ಭೇಟಿ ಮಾಡಿ ಮನವಿ: ಗುರುರಾಜ್‌

09:50 AM Jul 22, 2018 | |

ಮಂಗಳೂರು: ಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಈಗಾಗಲೇ ಘೋಷಣೆ ಮಾಡಿದ ಸರಕಾರದ ಪ್ರೋತ್ಸಾಹ ಧನ ನೀಡಲು ಮನವಿ ಮಾಡುತ್ತೇನೆ ಎಂದು ಕಾಮನ್ವೆಲ್ತ್‌  ಬೆಳ್ಳಿಪದಕ ಗೆದ್ದ ಕುಂದಾಪುರ ಮೂಲದ ವೇಟ್‌ಲಿಫ್ಟರ್‌ ಗುರುರಾಜ್‌ ಪೂಜಾರಿ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

Advertisement

ತೀರಾ ಬಡ ಕುಟುಂಬದಿಂದ ಬಂದು ವಿಶ್ವ ಮಟ್ಟದಲ್ಲಿ ಗಮನಸೆಳೆದ ಈ ಕ್ರೀಡಾಪಟುವಿಗೆ ಸರಕಾರದ ಆರ್ಥಿಕ ನೆರವು ಇನ್ನೂ ತಲುಪಿಲ್ಲ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ “ಕಾಮನ್ವೆಲ್ತ್‌ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್‌ಗೆ ರಾಜ್ಯ ಸರಕಾರ ಇನ್ನೂ ಕೊಟ್ಟಿಲ್ಲ 25 ಲಕ್ಷ ರೂ.’ ಎಂಬ ಶೀರ್ಷಿಕೆಯಲ್ಲಿ “ಉದಯವಾಣಿ’ ಜು. 13ರಂದು ವಿಶೇಷ ವರದಿ ಪ್ರಕಟ ಮಾಡಿತ್ತು. 

ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಕ್ರೀಡಾಸಚಿವ ಪ್ರಮೋದ್‌ ಮಧ್ವರಾಜ್‌, ಪ್ರೋತ್ಸಾಹ ಧನ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಈ ಹಿಂದೆ ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಗುರುರಾಜ್‌ ಅವರಿಗೆ ನೀಡಲು ಸಾಧ್ಯವಾಗಲಿಲ್ಲ. ಕೂಡಲೇ ಪ್ರೋತ್ಸಾಹ ಧನ ನೀಡಲಾಗುವುದು ಎಂದಿದ್ದರು. ಇದಾದ ಬಳಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್‌, ಸಚಿವ ಯು.ಟಿ. ಖಾದರ್‌ ಅವರು ಕೂಡ ಪ್ರೋತ್ಸಾಹ ಧನ ನೀಡುವ ಭರವಸೆ ನೀಡಿದ್ದರು. ಇದೀಗ ಗುರುರಾಜ್‌ ಅವರು ಖುದ್ದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಹಣಕಾಸು ನೆರವು ಬೇಕಾಗಿದ್ದು, ಈ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next