Advertisement

Udupi; ಮಾ.23ರಂದು ಅದಮಾರು ಮಠ, ಕೃಷ್ಣ ಸೇವಾ ಬಳಗದಿಂದ ಪೇಜಾವರ ಶ್ರೀಗಳಿಗೆ ಗುರುವಂದನೆ

10:16 AM Mar 23, 2024 | Team Udayavani |

ಉಡುಪಿ: ಇತ್ತೀಚೆಗಷ್ಟೇ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಪೂರೈಸಿ ಪುರ ಪ್ರವೇಶಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ಶ್ರೀಪಾದರಿಗೆ ಗುರುವಂದನೆ ಕಾರ್ಯಕ್ರಮವನ್ನು ಮಾರ್ಚ್ 23 ಶನಿವಾರದಂದು ಸಂಜೆ 3.30ಕ್ಕೆ ಆಯೋಜಿಸಲಾಗಿದೆ.

Advertisement

ಶ್ರೀ ಕೃಷ್ಣ ಸೇವಾ ಬಳಗ ಮತ್ತು ಶ್ರೀ ಅದಮಾರು ಮಠದ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಉಡುಪಿಯ ಶ್ರೀ ಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ.

ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅದಮಾರು ಮಠ ಇವರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಬಳಿಕ ಪೇಜಾವರ ಶ್ರೀಗಳು ಅಯೋಧ್ಯೆಯ ಶ್ರೀರಾಮನ ಮಂತ್ರಾಕ್ಷತೆಯನ್ನು ವಿತರಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next