Advertisement

Gyanvapi Dispute: ಮಸೀದಿ ಸಮಿತಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

12:04 AM Nov 04, 2023 | Team Udayavani |

ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅಲಹಾಬಾದ್‌ ಹೈಕೋರ್ಟ್‌ನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಅಂಜುಮನ್‌ ಇಂತೇಜಮೀಯಾ ಮಸೀದಿ ಸಮಿತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

Advertisement

2021ರಿಂದಲೂ ಅಲಹಾಬಾದ್‌ ಹೈಕೋರ್ಟ್‌ನ ಏಕಸದಸ್ಯ ಪೀಠವು ಜ್ಞಾನವಾಪಿ ಸಂಬಂಧಿಸಿದ ಎಐಎಂಸಿಯ ಅರ್ಜಿಯನ್ನು ವಿಚಾರಣೆ ನಡೆಸುತ್ತಿತ್ತು. ಈ ಸಂಬಂಧ ಆ.25ರಂದು ತೀರ್ಪು ಪ್ರಕಟವಾಗಬೇಕಿದ್ದ ಸಂದರ್ಭದಲ್ಲಿ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಪ್ರೀತಿಂಕರ್‌ ದಿವಾಕರ್‌ ಅವರು ಏಕಸದಸ್ಯ ಪೀಠದಿಂದ ಅರ್ಜಿಯನ್ನು ಹಿಂಪಡೆದು ತಮ್ಮ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದ್ದರು.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಈ ನಿರ್ಣಯವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಸುಪ್ರೀಂ ಮೊರೆ ಹೋಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next