Advertisement

ಜ್ಞಾನವಾಪಿ ಮಸೀದಿ ವಿವಾದ: ಮೊದಲಿಗೆ ಮುಸ್ಲಿಂ ಪರ ಅರ್ಜಿ ವಿಚಾರಣೆ

02:55 PM May 24, 2022 | Team Udayavani |

ವಾರಾಣಸಿ: ಜ್ಞಾನವಾಪಿ ಮಸೀದಿ ವಿವಾದ ಪ್ರಕರಣದ ವಿಚಾರಣೆಯನ್ನು ವಾರಾಣಸಿ ಜಿಲ್ಲಾ ನ್ಯಾಯಾಲಯವು ಮೇ.26ಕ್ಕೆ ಮುಂದೂಡಿದೆ. ಮೊದಲಿಗೆ ಮುಸ್ಲಿಮರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.

Advertisement

ಹಿಂದೂ ಪರ ವಕೀಲರ ಅರ್ಜಿ ತಿರಸ್ಕರಿಸುವ ಬಗ್ಗೆ ಆದೇಶ 7 11 CPC ಅಡಿಯಲ್ಲಿ ಮುಸ್ಲಿಂ ಕಡೆಯ ಮನವಿಯ ವಿಚಾರಣೆಯು ಮೇ 26 ರಂದು ನಡೆಯಲಿದೆ. ಆಯೋಗದ ವರದಿಗೆ ಆಕ್ಷೇಪಣೆ ಸಲ್ಲಿಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಎರಡೂ ಕಡೆಯವರಿಗೆ ಕೋರ್ಟ್ ಹೇಳಿದೆ ಎಂದು ಹಿಂದೂ ಪರ ವಕೀಲ ವಿಶು ಜೈನ್ ಹೇಳಿದರು.

ಇದನ್ನೂ ಓದಿ:ಫೇಸ್ ಬುಕ್ ನಲ್ಲಿ ಹಾಕಿದ್ದ ಸೆಲ್ಫಿ ಪೋಸ್ಟ್ ನಿಂದ 5 ವರ್ಷದ ಬಳಿಕ ಅರೆಸ್ಟ್ ಆದ ಕೊಲೆ ಆರೋಪಿ!

ಇದೇ ವೇಳೆ, ಜ್ಞಾನವಾಪಿ ಮಸೀದಿಯ ಒಳಭಾಗದಲ್ಲಿ ಕಂಡುಬಂದಿದೆ ಎಂದು ಹೇಳಲಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹೊಸತಾಗಿ ಅರ್ಜಿಯೊಂದು ಸೋಮವಾರ ಸಲ್ಲಿಕೆಯಾಗಿತ್ತು.

Advertisement

ಜಿಲ್ಲಾ ಕೋರ್ಟ್‌ನ ನ್ಯಾಯಾಧೀಶರು ಸಿವಿಲ್‌ ಜಡ್ಜ್ (ಹಿರಿಯ ಶ್ರೇಣಿ) ನ್ಯಾಯಾಧೀಶರ ಕೋರ್ಟ್‌ನಿಂದ ವರ್ಗಾವಣೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಜಿಲ್ಲಾ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು ಎಂದು ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next