ವಾರಾಣಸಿ:ಕಾಶಿ ವಿಶ್ವನಾಥ ದೇವಾಲಯದ ಸಮೀಪದ ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ಗುರುವಾರ (ಮೇ 19) ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.
Advertisement
ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಎರಡೂ ಕಡೆಯ ವಕೀಲರು ಹಾಜರಿದ್ದರು. ಸುಮಾರು 10ರಿಂದ 15 ಪುಟಗಳ ವರದಿ ಇದಾಗಿದೆ ಎಂದು ಅಸಿಸ್ಟೆಂಟ್ ಕೋರ್ಟ್ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.