Advertisement

Bangalore: ಅಪಾರ್ಟ್‌ಮೆಂಟ್‌ನಿಂದ ಬಿದ್ದು ಜಿಮ್‌ ತರಬೇತುದಾರ ಆತ್ಮಹತ್ಯೆ

10:34 AM Dec 26, 2023 | Team Udayavani |

ಬೆಂಗಳೂರು: ಒಡಿಶಾ ಮೂಲದ ಜೀಮ್‌ ತರ ಬೇತುದಾರನೊಬ್ಬ ನಾಲ್ಕು ಅಂತಸ್ತಿನ ಅಪಾರ್ಟ್‌ ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಹರಳೂರು-ಸರ್ಜಾಪುರ ಮುಖ್ಯರಸ್ತೆಯ ಅಪಾರ್ಟ್‌ಮೆಂಟ್‌ ನಿವಾಸಿ ಗಣೇಶ್‌ ಪಾಂಡ (32) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ರಾತ್ರಿ 11.30ಕ್ಕೆ ಘಟನೆ ನಡೆದಿದೆ. ಒಡಿಶಾ ಮೂಲದ ಗಣೇಶ್‌ ಪಾಂಡ ಮೂರು ವರ್ಷದ ಹಿಂದೆ ಬೆಂಗಳೂರಿಗೆ ಬಂದು ಜೀಮ್‌ ತರಬೇತುದಾರ ನಾಗಿ ಕೆಲಸ ಮಾಡುತ್ತಿದ್ದ. ಹರಳಸೂರು- ಸರ್ಜಾಪುರ ರಸ್ತೆಯಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಸಹೋದರಿ ಮನೆಯಲ್ಲಿ ವಾಸವಾಗಿದ್ದ.

ಈ ಮಧ್ಯೆ ವಿಪರೀತ ಮದ್ಯದ ಚಟ ಅಂಟಿಸಿಕೊಂಡಿದ್ದ ಪಾಂಡನಿಗೆ ಸಹೋದರಿ ಮತ್ತು ಭಾವ ಮದ್ಯ ಬಿಡಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಆದರೂ, ಮದ್ಯ ಸೇವಿಸುವುದನ್ನು ಬಿಟ್ಟಿರಲಿಲ್ಲ. ಭಾನುವಾರ ರಾತ್ರಿ ಕೂಡ ಅಕ್ಕ- ಭಾವನ ಜತೆಗೆ ಊಟ ಮಾಡಿ ಟೆರಾಸ್‌ ಮೇಲೆ ಹೋಗಿದ್ದಾನೆ. ಈ ವೇಳೆಯೂ ಮದ್ಯ ಸೇವಿಸಿದ್ದ. ಬಳಿಕ ಅಲ್ಲಿಂದ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಅದರಿಂದ ಆತನ ತಲೆ, ಕೈ-ಕಾಲುಗಳಿಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಣೇಶ ಪಾಂಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next