Advertisement

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ರಕ್ಷಣೆ ಇಲ್ಲದಂತಾಗುತ್ತದೆ: ದೇವೇಗೌಡ

05:32 PM May 14, 2020 | keerthan |

ಬೆಂಗಳೂರು: ಎಪಿಎಂಸಿಯ ಕಾಯಿದೆಯನ್ನು ತಿದ್ದುಪಡಿಯ ಮೂಲಕ ದುರ್ಬಲಗೊಳಿಸಿದರೆ ರೈತರು ಶೋಷಣೆಗೊಳಗಾದಾಗ ಯಾವುದೇ ರಕ್ಷಣೆ ನೀಡಲು ಸಾಧ್ಯವಾಗದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ರೀತಿ ಏಕಾಏಕಿ ತೀರ್ಮಾನ ಕೈಗೊಂಡರೆ ರೈತರು ಸಂಕಷ್ಟಕ್ಕೀಡಾಗುವರು ಮಧ್ಯವರ್ತಿಗಳ‌‌ ಕಪಿಮುಷ್ಟಿಯಿಂದ ಎಪಿಎಂಸಿ ಕಾಯ್ದೆ ರೈತರಿಗೆ ತಕ್ಕ ಮಟ್ಟಿನ ರಕ್ಷಣೆ ನೀಡಿತ್ತು ಆದರೆ ಎಪಿಎಂಸಿಯ ತಿದ್ದುಪಡಿ ಕಾಯ್ದೆ ಜಾರಿಯಾದರೆ ಬಂಡವಾಳಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದ ರೈತರು ಶೋಷಣೆಗೊಳಗಾಗುವ ಅಪಾಯವಿದೆ ಎಂದಿದ್ದಾರೆ.

ಇಡೀ ರಾಜ್ಯ ಕೋವಿಡ್-19 ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ‌ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರೋದು ಸರಿಯಲ್ಲ. ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ  ಹಿಂಪಡೆಯಬೇಕು ಎಂದು ದೇವೇ ಗೌಡರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next