Advertisement

ಐಕ್ಯತೆಯಿಂದ ಕೆಲಸ ಮಾಡಬೇಕಿದೆ: ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ.ದೇವೇಗೌಡ

02:13 PM Feb 14, 2021 | Team Udayavani |

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ಶಕ್ತಿ ಏನು ಎನ್ನುವುದನ್ನು ತೋರಿಸಬೇಕಿದೆ. ಸೀಟು ಹಂಚುವಾಗ ಸಣ್ಣಪುಟ್ಟ ವ್ಯತ್ಯಾಸವಾಗಬಹುದು. ಅದರ ಬಗ್ಗೆ ದಯವಿಟ್ಟು ಯಾರು ತಲೆ ಕೆಡಿಸಿಕೊಳ್ಳಬೇಡಿ, ನಾವೆಲ್ಲರೂ ಐಕ್ಯತೆಯಿಂದ ಕೆಲಸ ಮಾಡಬೇಕಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

Advertisement

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಇದನ್ನೂ ಓದಿ:ಪ್ರಧಾನಿಯಿಂದ ಭಾರತೀಯ ಸೇನೆಗೆ “ಮೈನ್ ಬ್ಯಾಟಲ್ ಟ್ಯಾಂಕ್ ಮಾರ್ಕ್ -1 ಎ” ಹಸ್ತಾಂತರ

ನಾನು ನಿಮಗೆ ಮಾರ್ಗದರ್ಶನ ಮಾಡಬಹುದಷ್ಟೇ. ಎಲ್ಲಾ ಕಡೆ ಪ್ರವಾಸ ಮಾಡಲು ಸಾಧ್ಯವಾಗದು. ಹೀಗೆ ಮಾಡಿ ಎಂದು ನಾನು ಸಲಹೆ ಕೊಡಬಹುದು ಅಷ್ಟೇ, ನಮ್ಮಲ್ಲಿ ಪ್ರಬಲವಾದ ಘಟಕಗಳಿದೆ. ಮುಂಬರುವ ಕರ್ನಾಟಕದ ಜಿ.ಪಂ,ತಾ.ಪಂ ಚುನಾವಣೆ ನಮಗೆ ಬಹಳ ಮುಖ್ಯ. ನಾವು ಹಿಂದೆ ಬಿದ್ದಿಲ್ಲ ಎಂದು ಸಾಬೀತು ಮಾಡಬೇಕಿದೆ ಎಂದು ಕರೆ ನೀಡಿದರು.

Advertisement

ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು. ಜೊತೆಗೆ ಈ ರಾಜ್ಯದಲ್ಲಿ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸಬೇಕು. ಅದು ನಿಮ್ಮಿಂದ ಮಾತ್ರ ಸಾಧ್ಯ, ನೀವೇ ಈ ಪಕ್ಷ ಉಳಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next