Advertisement

ಸೀಟು ಹಂಚಿಕೆ ಗೊಂದಲ : ಪಕ್ಷದ ತುರ್ತುಸಭೆ ಕರೆದ ಹೆಚ್‌.ಡಿ.ಕೆ.

08:32 AM Mar 13, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಸೀಟು ಹಂಚಿಕೆ ಗೊಂದಲ ಇನ್ನೂ ನಿವಾರಣೆಯಾಗಿಲ್ಲ. ಒಂದೆರಡು ಕ್ಷೇತ್ರಗಳಿಗೆ ಎರಡೂ ಪಕ್ಷಗಳ ನಡುವೆ ಜಗ್ಗಾಟ ಮುಂದುವರೆದಿದೆ. ಈ ಕುರಿತಾದಂತೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬುಧವಾರ ಸಾಯಂಕಾಲ 5 ಗಂಟೆಗೆ ಜೆ.ಡಿ.ಎಸ್‌. ಪಕ್ಷದ ತುರ್ತು ಸಭೆಯೊಂದನ್ನು ಕರೆದಿದ್ದಾರೆ.

Advertisement

ಈ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌. ವಿಶ್ವನಾಥ್‌, ಪಕ್ಷದ ಪ್ರಚಾರ ಸಮಿತಿ ಆಧ್ಯಕ್ಷ ವೈ.ಎಸ್‌.ವಿ. ದತ್ತಾ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸದ್ಯಕ್ಕೆ ಮೈತ್ರಿ ಪಕ್ಷಗಳ ನಡುವೆ ಕಗ್ಗಂಟಾಗಿರುವ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ. 

Advertisement

Udayavani is now on Telegram. Click here to join our channel and stay updated with the latest news.

Next