Advertisement

ತಾಕತ್ತಿದ್ದರೆ ಸಿದ್ದರಾಮಯ್ಯ ಪಕ್ಷೇತರರಾಗಿ ಸ್ಪರ್ಧಿಸಲಿ: ಎಚ್‌ಡಿಕೆ 

10:10 AM Mar 21, 2018 | Team Udayavani |

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಈ ಬಾರಿ ಪಕ್ಷೇತರರಾಗಿ ಕಣಕ್ಕಿಳಿದು ಗೆದ್ದು ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

Advertisement

ಮಂಗಳವಾರ ನಗರದಲ್ಲಿ ನಡೆದ ವಿಕಾಸ ಪರ್ವ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು  ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷಗಳನ್ನು ಒಡೆಯಲು ಮುಂದಾಗಿದ್ದಾರೆ. ಇವರು ಮೊದಲು ತಾವಿದ್ದ ಪಕ್ಷದ ಬೆನ್ನಿಗೇ ಚೂರಿ ಹಾಕಿದವರು. ಆನಂತರ ಕಾಂಗ್ರೆಸ್‌ಗೆ ಹೋಗಿದ್ದಾರೆ. ಕೊನೆಗೆ ಕಾಂಗ್ರೆಸ್‌ನಿಂದ ಕಣಕ್ಕಿಳಿದಾಗಲೂ ಕಷ್ಟಪಟ್ಟು ಕೇವಲ 250 ಮತಗಳ ಅಂತರದಿಂದ ಗೆದ್ದರು. ಬೇರೆ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವ ಇವರು ತಾಕತ್ತಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next