Advertisement

ನಿಸಾರ್ ಅಹಮದ್ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯಪ್ರಭೆ ಮುಸುಕಾದಂತಾಗಿದೆ: ಕುಮಾರಸ್ವಾಮಿ

10:10 PM May 03, 2020 | keerthan |

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಪ್ರಸಿದ್ಧರಾದ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ ಎಂದಿದ್ದಾರೆ.

‘ಜೋಗದ ಸಿರಿ ಬೆಳಕಿನಲ್ಲಿ’ ಹಾಡು ನನ್ನ ಕಿವಿಯಲ್ಲಿ ಈಗಲೂ ಅನುರಣಿಸುತ್ತಿದೆ. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ನಿಸಾರ್ ಅಹಮದ್ ಅವರ ಸಾಹಿತ್ಯ ಸೇವೆ ಅನನ್ಯ. ನಾಡು ಕಂಡ ಹೆಮ್ಮೆಯ ಸಾಹಿತಿ. 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಿಸಾರ್ ಅವರ ಕುಟುಂಬದ  ಸದಸ್ಯರು ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next