Advertisement

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

06:53 PM Jan 28, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ತೊರೆಯುವುದಾಗಿ ಹೇಳಿರುವ ಸಿ.ಎಂ. ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

Advertisement

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿಕೆ , ಅವರು ನಿನ್ನೆ ಕಾಂಗ್ರೆಸ್ ಬಿಡುವ ತೀರ್ಮಾನ ಮಾಡಿದ್ದಾರೆ.
ಅವರ ಮೇಲೆ ಯಾರು ಒತ್ತಡ ಹೇರುವುದಿಲ್ಲ.ಸೂಕ್ತ ಸಮಯದಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

1972ರಿಂದ ದೇವೇಗೌಡರ ಮತ್ತು ಸಿಎಂ ಇಬ್ರಾಹಿಂರ ಸಂಬಂಧ ಇದೆ.ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಮೊದಲಿನಿಂದಲೇ ದೇವೇಗೌಡರ ಜೊತೆ ಸಂಬಂಧ ಇದೆ.ಅವರು ಹಳೆಯ ಸಂಬಂಧದಿಂದ ಹೇಳಿರಬಹುದು ಎಂದರು.

ಇದನ್ನೂ ಓದಿ : ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?

ಕಾಂಗ್ರೆಸ್ ಬಿಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ.ನಾವು ಬೇರೆ ಕೆಲ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ.ಒತ್ತಡದಲ್ಲಿ ತೀರ್ಮಾನ ಮಾಡಲು ಆಗುವುದಿಲ್ಲ.ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಮಾಡುತ್ತಾರೆ ಎಂದರು.

Advertisement

ಸಿದ್ದರಾಮಯ್ಯ ನಂಬಿಕೊಂಡು ದೇವೇಗೌಡರನ್ನು ಬಿಟ್ಟು ಬಂದೆ ಎಂಬ ಇಬ್ರಾಹಿಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಿಂದಿನ ಕೆಲ ಘಟನೆಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಹಿಂದಿನ ಪ್ರಕ್ರಿಯೆಗಳನ್ನು ನೆನಪು ಮಾಡಿಕೊಂಡಿದ್ದಾರೆ‌.ಯಾಕೆ ಜನತಾದಳ ಬಿಡಬೇಕಾಯಿತು ಎಂಬ ವಿಷಯಗಳನ್ನು ,ಇಂದಿನ ಕಾಂಗ್ರೆಸ್ ನಲ್ಲಿ ನಡೆದ ಬೆಳವಣಿಗೆಗಳಿಂದ ನೆನಪು ಮಾಡಿಕೊಂಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next