Advertisement

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

09:04 AM Apr 06, 2020 | keerthan |

ಬೆಂಗಳೂರು: ಕೋವಿಡ್-19 ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಪ್ರಧಾನಿ ನರೇಂದ್ರ ಮೋದಿ ರವಿವಾರ ರಾತ್ರಿ ದೀಪ ಬೆಳಗಿಸಲು ಕರೆ ನೀಡಿದ್ದು, ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಸಂಸ್ಥಾಪನಾ ದಿನ ಆಚರಿಸಲು ಬಿಜೆಪಿಯು ಕೋವಿಡ್-19 ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ ಎಂದು ಪ್ರಶ್ನಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 1980 ಎಪ್ರಿಲ್ 6 ಬಿಜೆಒಪಿ ಸಂಸ್ಥಾಪನಾ ದಿನ. ಇಂದು ( ಎ.5 ರಂದು) ಬಿಜೆಪಿಗೆ ನಲವತ್ತು ವರ್ಷ ತುಂಬಲಿದೆ. ತನ್ನ ಸಂಸ್ಥಾಪನಾ ದಿನದ ಸಂಭ್ರಮವನ್ನು ಕೋವಿಡ್ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ಭಂಡತನ ಮೆರೆಯುತ್ತಿದೆಯೇ ಎಂದು ಎಚ್ ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ದೀಪ ಬೆಳಗಸುವ ಮೋದಿ ಕರೆ ನೀಡಿದ ಹಿಂದಿನ ವೈಜ್ಞಾನಿಕ ಕಾರಣ ಏನೆಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಬೇಕು ಎಂದು ಟ್ವೀಟ್ ನಲ್ಲಿ ಎಚ್ ಡಿಕೆ ಆಗ್ರಹಿಸಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next