Advertisement

ಜಮೀರ್ ಅಹಮದ್ ಆರೋಪಗಳಿಗೆ ಉತ್ತರ ಕೊಡಬೇಕಾಗಿಲ್ಲ: ಎಚ್ ಡಿ ಕುಮಾರಸ್ವಾಮಿ

03:52 PM Sep 13, 2020 | keerthan |

ಬೆಂಗಳೂರು: ತಾನೂ ಕೊಲಂಬೋಗೆ ಹೋಗಿದ್ದಾಗಿ ಶಾಸಕ ಜಮೀರ್ ಅಹಮದ್ ಖಾನ್ ಮಾಡಿರುವ ಆರೋಪಗಳಿಗೆ ಉತ್ತರ ಕೊಡಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕರು ಮತ್ತು ಮುಖಂಡರು ಶ್ರೀಲಂಕಾಕ್ಕೆ ಹೋಗಿದ್ದು ನಿಜ. ಪಕ್ಷದ ವಿಚಾರವಾಗಿ ಚರ್ಚಿಸಲು ಹೋಗಿದ್ದೆವು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದರು.

ಹಳೇ ಸ್ನೇಹಿತರು ಏಕೆ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೋ ಗೊತ್ತಿಲ್ಲ. ಗೋವಾ ಮೊದಲಾದ ಕಡೆ ಹೋದರೆ ಖರ್ಚು ಜಾಸ್ತಿಯಾಗಲಿದೆ ಎಂಬ ಕಾರಣಕ್ಕೆ ಕೊಲಂಬೋಗೆ ಹೋಗಿದ್ದೆವು. ಆ ವಿಚಾರವನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಶಿವಸೇನೆ ಗೂಂಡಾಗಳು ನನ್ನ ಅತ್ಯಾಚಾರ ಮತ್ತು ಹತ್ಯೆ ಮಾಡಲು BJP ಬಿಡಬೇಕೆ?: ಸಂಜಯ್ ಗೆ ಕಂಗನಾ

ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ನಿಲ್ಲಿಸಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ. ಆದರೆ, ತನಿಖೆ ಹಂತದಲ್ಲಿ ವಿಷಯಾಂತರವಾಗಬಾರದು ಮತ್ತು ದಾರಿ ತಪ್ಪಬಾರದು ಎಂದು ಹೇಳಿದರು.

Advertisement

ಕ್ಯಾಸಿನೋ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಕ್ಯಾಸಿನೋ ವಿಚಾರವೇ ಬೇರೆ. ಆದರೆ, ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವಂತಹ ದಂಧೆ ನಡೆಯುವುದು ನೈಟ್ ಬಾರ್ ಗಳಲ್ಲಿ. ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ 12 ಗಂಟೆಯಲ್ಲಿ ಅಂತಹ ಕಡೆಗಳಲ್ಲಿ ಹೋದರೆ ನಾವು ಭಾರತದಲ್ಲಿದ್ದೇವೆಯೇ ಎಂಬ ಅನುಮಾನ ಬರುತ್ತದೆ ಎಂದು ಎಚ್ ಡಿಕೆ ಹೇಳಿದರು.

ಇದನ್ನೂ ಓದಿ: ಅಪ್ಪಾಜಿ ಗೌಡರಿಗೆ ಆಗದವರು ಸಾವಿಗೆ ಕಾರಣವಾಗಿರಬಹುದು: ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ

Advertisement

Udayavani is now on Telegram. Click here to join our channel and stay updated with the latest news.

Next