Advertisement

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

09:56 PM May 16, 2024 | Suhan S |

ಮೈಸೂರು: ಸಂಸದನಾಗಿದ್ದಾಗಲೇ ನನ್ನ ಸಂಪರ್ಕಕ್ಕೆ ಸಿಗದ ಪ್ರಜ್ವಲ್‌ ರೇವಣ್ಣ,  ಈಗ ಸಿಗುತ್ತಾರಾ  ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ಪ್ರಜ್ವಲ್‌  ನನ್ನ ಸಂಪರ್ಕದಲ್ಲಿಲ್ಲ. ಅವರು ಸಂಸದರಾಗಿದ್ದಲೂ ನನ್ನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಹೀಗಿರುವಾಗ ಅವರು ವಿದೇಶಕ್ಕೆ ಹೋದ ಮೇಲೆ ಹೇಗೆ ನನ್ನ ಸಂಪರ್ಕದಲ್ಲಿ ಇರುತ್ತಾರೆ? ಪ್ರಜ್ವಲ್‌ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತನಿಖೆ ಸರಿಯಾಗಿ ನಡೆಯುತ್ತಿಲ್ಲ:

ಎಚ್‌.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಎಸ್‌ಐಟಿಯನ್ನು ಕಾಣದ ಕೈಗಳು ನಿಯಂತ್ರಿಸುತ್ತಿವೆ. ಪ್ರಕರಣದ ಕುರಿತು ಎಸ್‌ಐಟಿ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ಕೊಡದೆ, ಬೇರೆಯವರಿಗೆ ಮಾಹಿತಿ ನೀಡುತ್ತಿವೆ. ಇದರಿಂದ ಎಸ್‌ಐಟಿ ತನಿಖೆ ಸರಿಯಾಗಿ ಆಗುತ್ತಿಲ್ಲ. ಆದ್ದರಿಂದ ಎಸ್‌ಐಟಿ ಅಧಿಕಾರಿಗಳಿಗೆ ನಾನು ಮನವಿ ಮಾಡುತ್ತೇನೆ – ನಿಮ್ಮ ತಂದೆ, ತಾಯಿ, ಸಹೋದರ, ಸಹೋದರಿಯ ಮುಖ ನೋಡಿಕೊಂಡು ತನಿಖೆ ಮಾಡಿ. ಆ ಮೂಲಕ ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಿ ಎಂದರು.

ತಿಮಿಂಗಿಲ ಯಾರು ಎನ್ನುವುದು ಗೃಹ ಸಚಿವರಿಗೆ ಗೊತ್ತು: ಎಚ್‌ಡಿಕೆ:

Advertisement

ಮೈಸೂರು: ತಿಮಿಂಗಿಲ ಯಾರು ಅನ್ನೋದು ಗೃಹ ಸಚಿವ ಡಾ| ಜಿ.ಪರಮೇಶ್ವರ್‌ಗೆ ಚೆನ್ನಾಗಿ ಗೊತ್ತಿದೆ. ಆ ತಿಮಿಂಗಿಲವನ್ನು ಹಿಡಿಯುವುದು ಬಿಟ್ಟು ನನ್ನನ್ನು ಕೇಳಿದರೆ ಹೇಗೆ? ಅವರದ್ದೇ ಪಕ್ಷದ ಮಂಡ್ಯ ಶಾಸಕ ಒಂದು ವಾರದಲ್ಲಿ ತಿಮಿಂಗಲ ಸಿಗುತ್ತೆ ಎಂದಿದ್ದರು. ಅದು ಈಗ ಏನಾಯಿತು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್‌ಐಟಿ ಅಧಿಕಾರಿಗಳು ಅನಾವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದ್ದಾರೆ. ದೇವೇರಾಜೇ ಗೌಡರ ಪ್ರಕರಣ ದಾಖಲಾಗಿ ಒಂದು ತಿಂಗಳ ಬಳಿಕ ಅವರನ್ನು ಬಂಧಿಸಿದ್ದು ಯಾಕೆ? ಅವರಿಂದ ಎಸ್‌ಐಟಿಗೆ ಏನು ಮಾಹಿತಿ ಬೇಕಿದೆ? ಪ್ರಜ್ವಲ್‌ ವೀಡಿಯೋ ವೈರಲ್‌ ಮಾಹಿತಿಯೇ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯೇ ಅಥವಾ ಈ ಪ್ರಕರಣದ ಆಡಿಯೋ ತುಣುಕು ಬಿಡುಗಡೆ ಆದ ಬಗ್ಗೆ ಮಾಹಿತಿಯೇ ಎಂದು ಪ್ರಶ್ನಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next