Advertisement

ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆಯಲ್ಲಿ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

11:28 AM Sep 28, 2021 | Team Udayavani |

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ಘೋಷಿಸಲಾಗಿದ್ದು, ಜೆಡಿಎಸ್ ಪಕ್ಷವೂ ಎರಡೂ ಕಡೆ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಬಿಡದಿಯ ಪಕ್ಷದ ಕಾರ್ಯಾಗಾರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ ನಡೆಸುತ್ತಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು.

ಇದನ್ನೂ ಓದಿ:ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ಸಂಘಟನಾತ್ಮಕವಾಗಿ ಚುನಾವಣೆಗೆ ಸಜ್ಜಾಗಿದ್ದೇವೆ. ಕಾರ್ಯಾಗಾರದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಹಾನಗಲ್ ಕ್ಷೇತ್ರದಲ್ಲಿ ಈಗಾಗಲೇ ನಯಾಝ್ ಶೇಖ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ.ಸಿಂದಗಿಯಲ್ಲಿ ಐದು ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next