Advertisement

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

10:23 PM May 07, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣ ಹಾಗೂ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಮಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫ‌ಲವಾಗಿದ್ದು, ಈ ಬಗ್ಗೆ ನ್ಯಾಯಾಲಯದಲ್ಲೂ ಪ್ರಶ್ನಿಸುತ್ತೇವೆ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸದ್ಯದಲ್ಲೇ ರಾಜ್ಯಪಾಲರನ್ನೂ ಭೇಟಿ ಮಾಡುವುದಾಗಿ ಹೇಳಿದ್ದಾರೆ.

Advertisement

ಪೆನ್‌ಡ್ರೈವ್‌ ಬಿಡುಗಡೆಯಾದ ಬಗ್ಗೆ ಎಸ್‌ಐಟಿ ತನಿಖೆಯನ್ನೇ ಮಾಡುತ್ತಿಲ್ಲ. ಇದರ ಹಿಂದೆ ಇರುವುದೇ ಡಿಸಿಎಂ ಶಿವಕುಮಾರ್‌. ಪ್ರಕರಣದ ದಾರಿ ತಪ್ಪಿಸಲಾಗುತ್ತಿದೆ. ಹೀಗಾಗಿ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂಬುದು ನಮ್ಮ ಆಗ್ರಹ. ಇದನ್ನು ನ್ಯಾಯಾಲಯದ ಮುಂದೆಯೂ ಪ್ರಸ್ತಾವಿಸುತ್ತೇವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸುತ್ತೇವೆ ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next