ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಇಂದು ಸಾಲು ಸಾಲು ಟ್ವೀಟ್ ಗಳ ಮೂಲಕ ಬಿಜಿಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಮುಖ್ಯವಾಗಿ ತಮ್ಮ ಮೇಲೆ ಟೀಕೆ ಮಾಡಿದ ಸಚಿವ ಸುರೇಶ್ ಕುಮಾರ್ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ಎಚ್ ಡಿ ಕುಮಾರಸ್ವಾ,ಮಿ ಟ್ವಿಟ್ಟರ್ ಮೂಲಕ ಆರೋಪಗಳ ಸುರಿಮಳೆಗೈದಿದ್ದಾರೆ.
ಸಚಿವ ಸುರೇಶ್ ಕುಮಾರ್ ಅವರು, “ಕುಮಾರಸ್ವಾಮಿಯವರೇ, ನೆರೆ ಬಂದಾಗ ಸರಕಾರದ ನೆರವಿಲ್ಲದೆ ಪರಿಹಾರ ಕಾರ್ಯ ಮಾಡುವುದು, ಕೆರೆ-ಕಲ್ಯಾಣಿ ಸ್ವಚ್ಛತೆ ಮಾಡಿ ಪರಿಸರದ ಕುರಿತು ಅರಿವು ಮೂಡಿಸುವುದು, ಕುಗ್ರಾಮಗಳಲ್ಲಿ ಕನಿಷ್ಟ ಸೌಕರ್ಯ ಒದಗಿಸುವುದು. ಇವು ದೇಶಭಕ್ತಿ ಕಾರ್ಯಗಳೆಂದಾದರೆ ಚಕ್ರವರ್ತಿ ಸೂಲಿಬೆಲೆ ನಂ ೧ ದೇಶಭಕ್ತ” ಎಂಬ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸುತ್ತಾ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿದ್ದಾರೆ.
Related Articles
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾ,ಮಿ ಅವರ ಟ್ವೀಟ್ ಗಳು