Advertisement

ಮನೆ ಮನೆಗೆ ಆಹಾರ ತಲುಪಿಸುವ ಯೋಜನೆಗೆ ಎಚ್ ಡಿ ಕುಮಾರಸ್ವಾಮಿ ಚಾಲನೆ

05:55 PM Apr 22, 2020 | keerthan |

ಬೆಂಗಳೂರು: ಕೋವಿಡ್-19 ಸಂಕಷ್ಟದಲ್ಲಿರುವ ಜನರಿಗೆ ದಿನಸಿ ಆಹಾರ ಪದಾರ್ಥಗಳನ್ನು ಮನೆಮನೆಗೆ ತಲುಪಿಸುವ ಯೋಜನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಚಾಲನೆ ನೀಡಿದ್ದಾರೆ‌.

Advertisement

ರಾಮನಗರದ ಕ್ಷೇತ್ರದ 30 ಸಾವಿರ ಕುಟುಂಬಗಳಿಗೆ ಮತ್ತು ಚನ್ನಪಟ್ಡಣ ಕ್ಷೇತ್ರದ 30 ಸಾವಿರ ಕುಟುಂಬಗಳಿಗೆ ದಿನಸಿ ಆಹಾರ ಪದಾರ್ಥಗಳನ್ನು ನೀಡುವ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ .

ಈಗಾಗಲೇ ಜೆಡಿಎಸ್ ಸ್ವಯಂಸೇವಕರು ದಿನಸಿ ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡುತ್ತಿದ್ದು, ದಿನಸಿ ಆಹಾರ ಪದಾರ್ಥಗಳ‌‌ ಕಿಟ್ ಗಳನ್ನು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರಿಗೆ ಮತ್ತು ನಗರ ವ್ಯಾಪ್ತಿಯ ಜನರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next