Advertisement

ಮಗನ ಮದುವೆಯಲ್ಲೂ ರಾಜಕೀಯ ಹುಡುಕಿದ ವಿಷಕಾರುವ ಮನಸ್ಥಿತಿಗಳು: ಎಚ್ ಡಿ ಕುಮಾರಸ್ವಾಮಿ

09:29 AM Apr 20, 2020 | keerthan |

ಬೆಂಗಳೂರು: ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಲ್ಲ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.

Advertisement

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ ಮುಖ್ಯಮಂತ್ರಿ  ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದಿದ್ದಾರೆ.

ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು ಎಂದು ಎಚ್ ಡಿ ಕೆ ಹೇಳಿದ್ದಾರೆ.

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಚ್ ಡಿ ಕೆ ಲಾಕ್ ಡೌನ್ ನಡುವೆ ಮಗನ ವಿವಾಹ ಕಾರ್ಯ ನಡೆಸಿದ ಬಗ್ಗೆ ವಿವರಿಸಿದ್ದಾರೆ.

ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

Advertisement

“ಮನದ ಕೋಪ ತನ್ನ ಅರಿವಿನ ಕೇಡು

ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ

ನೆರೆಮನೆಯ ಸುಡದು ಕೂಡಲಸಂಗಮದೇವಾ” ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next