Advertisement

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

07:13 PM May 04, 2024 | Team Udayavani |

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿ ನ್ಯಾಯಾಲಯ ಶನಿವಾರ ನಿರಾಕರಿಸಿದ ಬೆನ್ನಲ್ಲೇ ಎಸ್ ಐಟಿ ಜೆಡಿಎಸ್ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ಶನಿವಾರ ಸಂಜೆ 6.45 ರ ವೇಳೆಗೆ ಬಂಧಿಸಿದೆ.

Advertisement

ಒಂದೆಡೆ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಅಧಿಕಾರಿಗಳ ತಂಡ ಹಲವು ಗಂಟೆಗಳ ಕಾಲ ಕಾದು ನಿವಾಸಲ್ಲಿದ್ದ ರೇವಣ್ಣ ಅವರನ್ನು ಬಂಧಿಸಿ ಭದ್ರತೆಯ ನಡುವೆ ಕರೆದೊಯ್ದಿದ್ದಾರೆ.

ಲೈಂಗಿಕ ಟೇಪ್‌ಗಳಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯ ಪೈಕಿ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕ ಪೊಲೀಸರಿಗೆ ದೂರು ನೀಡಿದ ನಂತರ ಗುರುವಾರ ಹೆಚ್‌.ಡಿ. ರೇವಣ್ಣ ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸರ ಪ್ರಕಾರ, ಮಹಿಳೆಯನ್ನು ಹುಣಸೂರಿನಲ್ಲಿ ಪತ್ತೆಹಚ್ಚಲಾಗಿದ್ದು, ಅವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಪಹರಣ ಪ್ರಕರಣದ ಆರೋಪಿ ಸತೀಶ್ ಬಾಬು ಅಲಿಯಾಸ್ ಸತೀಶ್ ಬಾಬಣ್ಣನನ್ನು ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next