Advertisement

ಬಿಜೆಪಿಗೆ ಮತ ಕೇಳುವ ನೈತಿಕತೆಯಿಲ್ಲ: ಪಾಟೀಲ

02:50 PM Oct 12, 2021 | Team Udayavani |

ಹಾವೇರಿ: ದೇಶದಲ್ಲಿ ಬೆಲೆಯೇರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಉತ್ತರ ಪ್ರದೇಶದಲ್ಲಿ ರೈತರನ್ನು ಕೊಲೆ ಮಾಡಿದ ಬಿಜೆಪಿ ಚುನಾವಣೆಯಲ್ಲಿ ಮತ ಕೇಳುವ ನೈತಿಕತೆ ಕಳೆದುಕೊಂಡಿದೆ ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

Advertisement

ನಗರದ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜನದ್ರೋಹಿ, ರೈತ ವಿರೋಧಿ ಸರ್ಕಾರವಾಗಿದೆ. ಉತ್ತರ ಪ್ರದೇಶದಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಗೃಹ ಸಚಿವರ ಮಗ ಕಾರು ಚಲಾಯಿಸಿ ಹತ್ಯೆ ಮಾಡಿದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ. ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೋರಾಟಕ್ಕೆ ಧ್ವನಿಗೂಡಿಸಲು ಹೋದರೆ ಅವರನ್ನು ಬಂಧಿಸುತ್ತಾರೆ. ದೇಶದಲ್ಲಿ ಅಜಾರಕತೆ ಸೃಷ್ಟಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಯಡಿಯೂರಪ್ಪ ಎರಡು ವರ್ಷ ಅಧಿಕಾರ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಚಾಲಕನಾಗಿದ್ದವರ ಮೇಲೆ ಐಟಿ ದಾಳಿಯಾಗಿ 4,000 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ಪತ್ತೆಯಾಗಿದೆ. ಈ ಆಸ್ತಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಅವರು, ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಬಿಜೆಪಿಯವರು ಲೂಟಿ ಮಾಡಿರುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಹಣ ಸಂಗ್ರಹ ಮಾಡಿದ ಮುಖ್ಯ ಎಂಜಿನಿಯರ್‌ ಮೇಲೆ ಇನ್ನೂ ಕ್ರಮವಾಗಿಲ್ಲ. ಅವರನ್ನು ಅಮಾನತುಗೊಳಿಸಲು ರಾಜ್ಯ ಬಿಜೆಪಿ ಸರ್ಕಾರ ಮುಹೂರ್ತ ನೋಡುತ್ತಿದೆ ಎಂದು ಟೀಕಿಸಿದರು.

ಹಾನಗಲ್ಲ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಕಳೆದ ಮೂರು ವರ್ಷಗಳಿಂದ ಉತ್ತಮ ಸೇವೆ ಮಾಡಿದ್ದಾರೆ. ಅವರು 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ಆಡಳಿತ ಪಕÒ‌ ಚುನಾವಣೆಯಲ್ಲಿ ಕಾನೂನು ಬಾಹಿರ ಕೆಲಸ ಮಾಡುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಮೂಕಪ್ರೇಕ್ಷಕರಾಗಿ ಸುಮ್ಮನೆ ಕುಳಿತುಕೊಳ್ಳದೆ ಕ್ರಮ ಕೈಗೊಳ್ಳಬೇಕು ಎಂದರು.

ಹಾನಗಲ್ಲ ಉಪಚುನಾವಣೆಯಲ್ಲಿ ಪಕ್ಷ‌ದ ಹಲವರಿಗೆ ಜವಾಬ್ದಾರಿ ವಹಿಸಲಾಗಿದೆ. ಉಪಚುನಾವಣೆ ಉಸ್ತುವಾರಿ ಸಮಿತಿ ಅಧ್ಯಕ್ಷ‌ನಾಗಿ ನಾನು ಕಾರ್ಯನಿರ್ವಹಿಸಲಿದ್ದೇನೆ. ಆರ್‌.ವಿ.ದೇಶಪಾಂಡೆ ಅವರು ಉಪಾಧ್ಯಕ್ಷ‌ರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷ‌ ಸಲೀಂ ಅಹ್ಮದ್‌ ಸಂಚಾಲಕರಾಗಿ, ಮನೋಹರ ತಹಶೀಲ್ದಾರ್‌ ಸಹ ಸಂಚಾಲಕರಾಗಿ, ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸಂಯೋಜಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

Advertisement

ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ, ದೇಶದಲ್ಲಿ ಬೆಲೆ ಏರಿಕೆ ದುಷ್ಪರಿಣಾಮಗಳನ್ನು ಜನರು ಎದುರಿಸುತ್ತಿದ್ದಾರೆ. ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಬಡವರು ಗಳಿಸೋದು ನೂರು ರೂ. ಆದರೆ, ಪೆಟ್ರೋಲ್‌ ಗೇ 110 ರೂ. ಆದರೆ ಏನು ಮಾಡಬೇಕು. ಹೊಟ್ಟೆಗೆ ಏನು ತಿನ್ನಬೇಕು. ಆದ್ದರಿಂದ ಜನರು ಬಿಜೆಪಿಯ ಜನವಿರೋಧಿ ನೀತಿ ಬಗ್ಗೆ ಆಕ್ರೋಶಗೊಂಡಿದ್ದಾರೆ ಎಂದರು.

ಶ್ರೀನಿವಾಸ ಮಾನೆ ಅವರು ಯುವ ನಾಯಕರಾಗಿದ್ದು, ಶಾಸನ ಸಭೆಯಲ್ಲಿ ಕೆಲಸ ಮಾಡಿದ ಅನುಭವವಿದೆ. ಅವರು ಹಾನಗಲ್ಲಿಗೆ ವಲಸೆ ಬಂದಿಲ್ಲ. ಮೂರು ವರ್ಷಗಳಿಂದ ಇಲ್ಲಿಯೇ ನಿರಂತರ ಕೆಲಸ ಮಾಡಿದ್ದಾರೆ. ಈ ಉಪಚುನಾವಣೆಯಲ್ಲಿ ಪಕÒ‌ ಗೆಲುವು ಸಾ  ಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯಾಧ್ಯಕÒ‌ ಸಲೀಂ ಅಹ್ಮದ್‌ ಮಾತನಾಡಿ, ಈ ಬಾರಿ ಕಾಂಗ್ರೆಸ್‌ಗೆ ಎಲ್ಲ ವರ್ಗದ ಜನರ ಆಶೀರ್ವಾದವಿದೆ. ಕಳೆದ ಚುನಾವಣೆಯಲ್ಲಿ ಶ್ರೀನಿವಾಸ ಮಾನೆ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಉಪಚುನಾವಣೆಯಲ್ಲಿ ನಮ್ಮ ಸರ್ವೆ  ಮಾಹಿತಿ ಪ್ರಕಾರ ಪಕÒ‌ದ ಅಭ್ಯರ್ಥಿ ಸುಮಾರು 20 ಸಾವಿರಕ್ಕೂ ಅ ಧಿಕ ಮತಗಳ ಅಂತರದಿಂದ ಗೆಲುವು ಸಾ ಧಿಸುವ ವಿಶ್ವಾಸವಿದೆ ಎಂದರು. ಜಿಲ್ಲಾಧ್ಯಕ್ಷ‌ ಎಂ.ಎಂ.ಹಿರೇಮಠ, ಮಾಜಿ ಶಾಸಕ ಡಿ.ಆರ್‌.ಪಾಟೀಲ, ಎಸ್‌.ಆರ್‌ .ಪಾಟೀಲ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next