Advertisement

ಉಳ್ತೂರು: ಎಚ್.ಸುರೇಂದ್ರ ಹೆಗ್ಡೆ ಹಲ್ತೂರು ಹೃದಯಾಘಾತದಿಂದ ನಿಧನ

08:33 AM Jan 02, 2020 | Team Udayavani |

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಉಳ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಚ್.ಸುರೇಂದ್ರ ಹೆಗ್ಡೆ ಹಲ್ತೂರು (74) ಹೃದಯಾಘಾತದಿಂದ ಇಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

Advertisement

ಕಳೆದ ಹಲವು ವರ್ಷಗಳಿಂದಲೂ ವಿಆರ್‌ಎಲ್ ಸಂಸ್ಥೆಯ ಕುಂದಾಪುರ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ನಿವೃತ್ತಿಯ ಬಳಿಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next