Advertisement

ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ: ಎಚ್‌. ವಿಶ್ವನಾಥ್‌

10:39 PM Jul 25, 2022 | Team Udayavani |

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್‌ ಉತ್ಸವ ನಡೆಯಬೇಕಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು.

Advertisement

ತಮ್ಮ ಹುಟ್ಟುಹಬ್ಬಕ್ಕೆ ಸ್ನೇಹಿತರೊಬ್ಬರು ಉಡುಗೊರೆಯಾಗಿ ನೀಡಿದ್ದ ಆ್ಯಂಬುಲೆನ್ಸ್‌ ಅನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆ ಕಲಾಮಂದಿರದಲ್ಲಿ ಸಿದ್ದರಾಮಯ್ಯ ಸಾಧನೆ ಕುರಿತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಂಗ್ರೆಸ್‌ ಬಗ್ಗೆ ಮಾತನಾಡಲಿಲ್ಲ. ಸ್ವತಃ ಸಿದ್ದರಾಮಯ್ಯ ಕೂಡ ಕಾಂಗ್ರೆಸ್‌ ಹೆಸರೇಳಲಿಲ್ಲ. ಬರೀ ಸಿದ್ದರಾಮಯ್ಯನವರ ಬಗ್ಗೆಯೇ ಪುಂಗಿ ಊದಿದರೇ, ಕಾಂಗ್ರೆಸ್‌ ಕುರಿತು ಪುಂಗಿ ಊದುವವರು ಯಾರು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಯಡಿಯೂರಪ್ಪ ಕೊಡುಗೆ ಅಪಾರ. ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಪಕ್ಷಕ್ಕೆ ಅವರು ಮಾರ್ಗದರ್ಶನ ನೀಡುವ ಅವಶ್ಯಕತೆಯಿದೆ. ಹೀಗಾಗಿ ಯಡಿಯೂರಪ್ಪ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು ಎಂದು ಬಿಎಸ್‌ವೈ ಅವರ ನಡೆಯನ್ನು ಸಮರ್ಥಿಸಿಕೊಂಡರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next