Advertisement

ಎಚ್‌.ವಿಶ್ವನಾಥ್‌ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ

12:30 AM Mar 18, 2019 | Team Udayavani |

ಬೆಂಗಳೂರು: ಬಳಲಿಕೆ, ಸುಸ್ತು, ಎದೆನೋವಿನ ಕಾರಣ ಹೈದರಾಬಾದ್‌ನಲ್ಲಿ ಆರೋಗ್ಯ ತಪಾಸಣೆಗೊಳಗಾಗಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌, ನಗರದ ಜಯದೇವ ಹೃದ್ರೋಗ ಸಂಸ್ಥೆಗೆ ದಾಖಲಾಗಿದ್ದಾರೆ. ಎಚ್‌. ವಿಶ್ವನಾಥ್‌ಗೆ ಮತ್ತೂಮ್ಮೆ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.

Advertisement

ಸೋಮವಾರ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಈ ಮಧ್ಯೆ, ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರು ಆಸ್ಪತ್ರೆಗೆ ಆಗಮಿಸಿ ಎಚ್‌.ವಿಶ್ವನಾಥ್‌ ಅವರ ಆರೋಗ್ಯ ವಿಚಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next