Advertisement

ರಾಜಕಾರಣ ಎಲ್ಲಿಗೆ ಹೋಗಿ ನಿಂತಿದೆ..? ನನ್ನ ಕಾಪಾಡುವಲ್ಲಿ ಯಡಿಯೂರಪ್ಪ ವಿಫಲ: ವಿಶ್ವನಾಥ್ ಬೇಸರ

02:43 PM Jan 28, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ಆದರೆ ಈ ಮೈತ್ರಿಯು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಗೆ ಬೇಸರ ತರಿಸಿದೆ.

Advertisement

ನಾನು ಬಿಟ್ಟು ಬಂದು ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ರಾಜಕಾರಣ ಎಲ್ಲಿಗೆ ಹೋಗಿ ನಿಂತಿದೆ. ಎಲ್ಲ ಪಕ್ಷಗಳ ನಾಯಕರ ನಡವಳಿಕೆ ಬದಲಾಗಿದೆ. ಮೂರು ಪಕ್ಷಗಳು ಸೇರಿ ನನ್ನ ಶೂಟ್ ಮಾಡಿದವು .ನನ್ನನ್ನು ಕಾಪಾಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಮಡಿದೆ. ಸಭಾಪತಿ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ತೀರ್ಮಾನಿಸಿದೆ. ಉಪ ಸಭಾಪತಿ ಚುನಾವಣೆಗೆ ಬಿಜೆಪಿಯ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರಾಜಕೀಯ ವೈರಿ ಡಿಕೆಶಿ ಕೊಠಡಿಗೆ ಯೋಗೇಶ್ವರ್ ಪ್ರವೇಶ: ಇಲ್ಲೂ ಇದೆಯಾ ಸಾಹುಕಾರ್ ಪಾತ್ರ?

Advertisement

ಸಭಾಪತಿ ಸ್ಥಾನದ ಮೇಲೆ ಕಣ್ಣು: ಎಚ್ ವಿಶ್ವನಾಥ್ ಅವರು ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿದೆ. ಬುಧವಾರ ಮೈಸೂರಿನಲ್ಲಿ ಮಾತನಾಡಿದ್ದ ಅವರು, ನಾನು ಕ್ಯಾಬಿನೆಟ್‌ ದರ್ಜೆ ಸಚಿವನಾಗಿದ್ದವನು, ಉಪ ಸಭಾಪತಿ ಹುದ್ದೆಗೆ ಒಪ್ಪಲಾರೆ. ಆದರೆ ಪಕ್ಷ, ಮುಖ್ಯಮಂತ್ರಿಗಳು ವಿಶ್ವಾಸವಿಟ್ಟು ಸಭಾಪತಿ ಹುದ್ದೆ ನೀಡಿದರೆ ನೋಡೋಣ ಎಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next