Advertisement

ಜೈಲಿಗೆ ಹೋಗಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಿ

12:04 PM Dec 02, 2019 | Suhan S |

ಹುಣಸೂರು : ನಾನು ಹುಣಸೂರು ಅಭಿವೃದ್ಧಿಗೆ ಹಲವಾರು ಕನಸುಗಳನ್ನು ಕಂಡಿದ್ದೇನೆ. ಆ ಎಲ್ಲಾ ಕನಸುಗಳನ್ನು ನನಸು ಮಾಡಲು ಮತ ಭಿಕ್ಷೆ ನೀಡಿ, ಎಂದು ಹುಣಸೂರು ಮತದಾರರಿಗೆ ಕರಪತ್ರದ ನೀಡಿ ಎ.ಹೆಚ್.ವಿಶ್ವನಾಥ್ ಮನವಿ ಮಾಡಿಕೊಂಡರು.

Advertisement

ನಗರದಲ್ಲಿ ಮಾದ್ಯಮಗಳ ಜೊತೆ ಸಂವಾದ ನಡೆಸಿದ ಬಿಜೆಪಿ ಅಭ್ಯರ್ಥಿ ಎ.ಹೆಚ್.ವಿಶ್ವನಾಥ್ , ಹುಣಸೂರು ಜಿಲ್ಲೆ ಕಡ್ಡಾಯವಾಗಿ ಮಾಡೇ ಮಾಡುತ್ತೇವೆ.ಇದು ಚುನಾವಣೆಗಾಗಿ ಎತ್ತಿದ ವಿಚಾರವಲ್ಲ. ಕಳೆದ ಒಂದು ವರ್ಷದಿಂದ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಾ ಬಂದಿದ್ದೇನೆ. ಹುಣಸೂರು ಕೃಷಿ ಆರ್ಥಿಕ ವಲಯ ಚೆನ್ನಾಗಿದೆ.ರೈತರನ್ನು ಆರ್ಥಿಕವಾಗಿ ಮೇಲೆತ್ತಬೇಕು.ಬೆಳಿಗ್ಗೆ ಎಪಿಎಂಸಿ‌ ಸದಸ್ಯರು ಬಂದು ಹುಣಸೂರು ಜಿಲ್ಲಾ ಮಾರುಕಟ್ಟೆ ಹೇಗಿರುತ್ತೆ ಅಂತ ಕೇಳಿದ್ದಾರೆ. ಹೀಗಾಗಿ ದೇವರಾಜ ಅರಸು ಹೆಸರಲ್ಲೇ ಜಿಲ್ಲೆ ಮಾಡಲು ಬದ್ಧವಾಗಿದೆ ಎಂದರು.

ಸಾಹಿತಿಗಳ ಮೇಲೆ ಹರಿಹಾಯ್ದ ಹಳ್ಳಿಹಕ್ಕಿ: ರಾಜ್ಯದಲ್ಲಿ ಸಾಹಿತ್ಯ ಭೌಧಿಕ ದಿವಾಳಿಯಾಗಿದೆ. ಸಾಹಿತಿಗಳು ಭೌದ್ಧಿಕವಾಗಿ ದಿವಾಳಿಯಾಗಿದ್ದಾರೆ. ಜನತಂತ್ರ ವ್ಯವಸ್ಥೆಯಲ್ಲಿ ನೀವು ಎಲ್ಲಾದರೂ ರಾಜಕೀಯವಾಗಿ ಚರ್ಚೆ ಮಾಡಿದ್ದೀರಾ? ಸಾಹಿತಿಗಳು ಚಿಂತಕರು ಮನೆಯಲ್ಲಿ ಕೂತು ಹೇಳಿಕೆ ಕೊಡುತ್ತೀರಾ.ಜನರ ಮನಸ್ಸಿನಲ್ಲಿ ಏನಿದೆ ಅಂತ ಬಂದು ನೋಡಿದ್ದೀರ.
ನೀವು ಯಾವುದೋ ಪಕ್ಷ, ಯಾವುದೋ ರಾಜಕಾರಣಿ ಪರ ಮಾತನಾಡುತ್ತೀರಿ. ನಾನು ನಿಮ್ಮಂತೆ ಕಾಗಕ್ಕ ಗೂಬಕ್ಕನ ಕಥೆ ಬರೆದಿಲ್ಲ. ನಾನು ವಸ್ತುಸ್ಥಿತಿಯ ಸಾಹಿತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಹಣಕ್ಕಾಗಿ ಅಧಿಕಾರಕ್ಕಾಗಿ ಜೆಡಿಎಸ್ ಗೆ ರಾಜೀನಾಮೆ ಕೊಟ್ಟಿಲ್ಲ. ನಾನು ಸ್ವಾಭಿಮಾನಕ್ಕೆ ಪೆಟ್ಟಾಗಿ ರಾಜೀನಾಮೆ ಕೊಟ್ಟಿದ್ದೇನೆ. ಆಗ ಮತ ಕೊಟ್ಟ ಜನರಿಗೆ ಹೇಳಲು‌ ಸಾಧ್ಯವಾಗಲಿಲ್ಲ. ನನ್ನ ಮನಸ್ಸಿಗೆ ಘಾಸಿಯಾಗಿ ನಾನು ರಾಜೀನಾಮೆ ಕೊಡಬೇಕಾಗಿ ಬಂತು. ಹುಣಸೂರಿನಲ್ಲಿ‌ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹನುಮಜಯಂತಿ ವೇಳೆ ಸುಳ್ಳು ಕೇಸ್‌ಗಳನ್ನು ಹಾಕಲಾಗಿದೆ. 80 ವರ್ಷ ವಯಸ್ಸಾದವರಿಗೂ ರೌಡಿ ಶೀಟರ್ ಓಪನ್ ಮಾಡಲಾಗಿದೆ. ಹುಣಸೂರಿನಲ್ಲಿ ಹಬ್ಬ ಹರಿದಿನ ಮಾಡಲು ಪೊಲೀಸ್ ಅನುಮತಿ ಬೇಕಿದೆ ಎಂದರು.

ನಾನು ಅಭಿವೃದ್ಧಿಗೆ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಮತ ಕೇಳುತ್ತಿರುವುದು ಜನರ ಮೇಲೆ ಕೇಸ್ ಹಾಕಸಲಾ? ನಿಮಗೆ ಮತ ಹಾಕಿ ಜನ ಜೈಲಿಗೆ ಹೋಗಬೇಕಾ. ನಾನು ಅಧಿಕಾರಕ್ಕೆ ಬಂದ ತಕ್ಷಣ ಜನರ‌ ಮೇಲಿನ‌ ಕೇಸ್ ಗಳನ್ನು ವಾಪಸ್ ತೆಗೆಸಲಾಗುತ್ತೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಭರವಸೆ ನೀಡಿದ್ದಾರೆ. ಪ್ರೀತಿ ವಿಶ್ವಾಸಕ್ಕೆ ಬಿಜೆಪಿಗೆ ಮತ ಕೊಡಿ, ಜೈಲಿಗೆ ಹೋಗಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಿ. ಲಕ್ಷ್ಮಣ ತೀರ್ಥ ನದಿ‌ ಶುದ್ದೀಕರಕ್ಕೆ ಕ್ರಮ ವಹಿಸಲಾಗುತ್ತಿದೆ. ಇದಕ್ಕೆ 125 ಕೋಟಿ ವೆಚ್ಚದ ಪ್ರಾಜೆಕ್ಟ್ ರೆಡಿಯಾಗಿದೆ. ಹುಣಸೂರು ಜಿಲ್ಲೆಯಾಗಲು ಯೋಗ್ಯವಾದ ಸ್ಥಳವಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next