Advertisement

ಸಂಸದ ಶ್ರೀನಿವಾಸ್‌ ಪ್ರಸಾದ್‌  ರಾಜಕೀಯ ಅಲೆಮಾರಿಗಳ ರಾಜ

07:49 PM Dec 15, 2022 | Team Udayavani |

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್‌ ರಾಜಕೀಯ ಅಲೆಮಾರಿಗಳ ರಾಜ. ಅವರು ಒಂದೇ ಪಕ್ಷವನ್ನು ಎರಡೆರಡು ಬಾರಿ ಸೇರ್ಪಡೆಯಾಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ವಾಗ್ಧಾಳಿ ನಡೆಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮನ್ನು ಶ್ರೀನಿವಾಸ ಪ್ರಸಾದ್‌ ರಾಜಕೀಯ ಅಲೆಮಾರಿ ಎಂದು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿ, ನಾನು ಹಾಗೂ ಶ್ರೀನಿವಾಸಪ್ರಸಾದ್‌ ಹಳೆಯ ಸ್ನೇಹಿತರು, ಬಹುಕಾಲದ ಒಡನಾಡಿಗಳು. ಅದೆಲ್ಲವನ್ನು ಮರೆತು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅವರ‌ನ್ನು ನಾನು ಭೇಟಿ ಮಾಡಿದ್ದನ್ನೇ ಘೋರ ಅಪರಾಧ ಎಂಬಂತೆ ಪ್ರಸಾದ್‌ ಬಿಂಬಿಸುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಸರಿಯಲ್ಲ. ಯಾರನ್ನು ಮೆಚ್ಚಿಸಲು ನನ್ನ ವಿರುದ್ದ ಮುಗಿಬಿದ್ದಿದ್ದೀರಿ. ಸಂಸತ್‌ ಸದಸ್ಯರಾಗಿರುವ ನೀವು ನಿಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ನೀಡುವ ಬದಲು ಏಕಾಏಕಿ ನನ್ನ ವಿರುದ್ಧ ಏಕೆ ತಿರುಗಿ ಬಿದ್ದಿದ್ದೀರಿ ಎಂದು ಕಿಡಿಕಾರಿದರು.

ಹಣದ ಆಮಿಷ ಒಡ್ಡಿದ್ದರು: ನಾನು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಲು ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಹಾಗೂ ಶ್ರೀನಿವಾಸಪ್ರಸಾದ್‌ ಅವರು ನನಗೆ ಹಣದ ಆಮಿಷ ಒಡ್ಡಿದ್ದರು. ಈ ಬಗ್ಗೆ ಬಾಂಬೆ ಡೈರೀಸ್‌ ಪುಸ್ತಕದಲ್ಲಿ ಉಲ್ಲೇಖೀಸಿದ್ದೇನೆ. ಪುಸ್ತಕದ ಮೊದಲ ಅಧ್ಯಾಯದÇÉೇ ಈ ವಿಚಾರವಿದೆ ಎಂದು ಹೊಸ ಬಾಂಬ್‌ ಸಿಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next