Advertisement

ಹಾರ್ದಿಕ್‌ ಪಾಂಡ್ಯ ಐಪಿಎಲ್‌ಗ‌ೂ ಅನುಮಾನ

12:30 AM Feb 23, 2019 | Team Udayavani |

ಹೊಸದಿಲ್ಲಿ: ಗಾಯಾಳಾಗಿ ಆಸ್ಟ್ರೇಲಿಯ ವಿರುದ್ಧ ಸರಣಿಯಿಂದ ಹೊರಬಿದ್ದಿರುವ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯಗೆ ಈಗ ಐಪಿಎಲ್‌ನಿಂದಲೂ ಬೇರ್ಪಡುವ ಆತಂಕ ಎದುರಾಗಿದೆ. ದೇಹದ ಸ್ನಾಯು ಶಕ್ತಿಯನ್ನು ಬಲಪಡಿಸಿಕೊಳ್ಳಲು ವೈದ್ಯರು ಹೆಚ್ಚುವರಿ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೂ 3 ವಾರದ ಬಳಿಕ ಪಾಂಡ್ಯ ಚೇತರಿಕೆ ಮಟ್ಟವನ್ನು ನೋಡಿಕೊಂಡು ಅಂತಿಮ ನಿರ್ಧಾರ  ತೆಗೆದುಕೊಳ್ಳಲಾಗುವುದು. 

Advertisement

ಈಗಾಗಲೇ ಹಾರ್ದಿಕ್‌ ಪಾಂಡ್ಯ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ ಕಳುಹಿಸಲಾಗಿದೆ. ಅವರು ಅಲ್ಲಿ ಮೂರು ವಾರಗಳ ಕಾಲ ಪುನಶ್ಚೇತನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಫಿಟ್‌ನೆಸ್‌ ಪರೀಕ್ಷೆಗೆ ಒಳಗಾಗಲಿದ್ದಾರೆ. ಇದರಲ್ಲಿ ಉತ್ತೀರ್ಣರಾದರೆ ಐಪಿಎಲ್‌ಗೆ ಆಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next