Advertisement

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ

03:34 PM May 23, 2020 | Naveen |

ಹಗರಿಬೊಮ್ಮನಹಳ್ಳಿ: ಕೋವಿಡ್ ವೈರಸ್‌ ಪರಿಣಾಮ ಲಾಕ್‌ಡೌನ್‌ನಿಂದಾಗಿ ಸಂತ್ರಸ್ತರಾದ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 10ಸಾವಿರ ರೂ.ಸಹಾಯಧನ ಮತ್ತು ಆಹಾರ ಸಾಮಾಗ್ರಿ ವಿತರಿಸಬೇಕು ಎಂದು ಗ್ರಾಕೂಸ್‌ ಸಂಘಟನೆಯ ಸಂಚಾಲಕಿ ಎಂ.ಬಿ.ಕೊಟ್ರಮ್ಮ ಆಗ್ರಹಿಸಿದರು.

Advertisement

ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಕಾರ್ಮಿಕ ಕಾಯ್ದೆಗಳ ಅಮಾನತು ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ವಲಸೆ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು. ರಾಜ್ಯದಲ್ಲಿ ಕಾರ್ಮಿಕ ಕಾನೂನು ಸುಗ್ರಿವಾಜ್ಞೆ ತಡೆಯೊಡ್ಡಬೇಕು. ಹಮಾಲಿ ಕಾರ್ಮಿಕರಿಗೆ ಮಾರಕವಾದ ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು. ತಹಶೀಲ್ದಾರ್‌ ಆಶಪ್ಪ ಪೂಜಾರ್‌ಗೆ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ಅಕ್ಕಮಹಾದೇವಿ, ಹನುಮಂತಪ್ಪ, ಆನಂದಗೌಡ, ತ್ರಿವೇಣಿ, ಕೊಟ್ರೇಶ, ಗೋಣಿಬಸಪ್ಪ, ಯಮುನಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next