Advertisement

ತಲೆ ಕೂದಲು ಉದುರಿದ್ದಕ್ಕೆ ನೊಂದು ಯುವತಿ ಆತ್ಮಹತ್ಯೆ

04:29 PM Jul 02, 2022 | Team Udayavani |

ಮೈಸೂರು: ಚರ್ಮ ರೋಗ ಸಮಸ್ಯೆಯಿಂದಾಗಿ ಕೂದಲು ಉದುರುತ್ತಿದ್ದರಿಂದ ಬೇಸತ್ತ ಯುವತಿ ನೇಣಿಗೆ ಶರಣಾಗಿರುವ ಘಟನೆ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.

Advertisement

ರಾಘವೇಂದ್ರ ಬಡಾವಣೆ ನಿವಾಸಿ ಕಾವ್ಯಶ್ರೀ(22) ಮೃತರು. ಕಳೆದ ಹಲವು ದಿನಗಳಿಂದ ಪತ್ತು ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಗೆ ಕೂದಲು ಉದುರುತ್ತಿತ್ತು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಕಾಲ ಕಳೆದಂತೆ ಕೂದಲು ಸಂಪೂರ್ಣವಾಗಿ ಕಳೆದುಕೊಂಡಿದ್ದರಿಂದ ಮನನೊಂದು ಶುಕ್ರವಾರ ಮುಂಜಾನೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next