Advertisement

ಕೋಟ ಮೂರ್ಕೈಯಲ್ಲಿ ಪಾದಚಾರಿ ಮೇಲ್ಸೇತುವೆಗೆ ಸಂಸದರಿಗೆ ಶಾಸಕ ಹಾಲಾಡಿ ಪತ್ರ

07:10 PM Jun 23, 2021 | Team Udayavani |

ಕೋಟ : ಜನಸಂಚಾರ ಹೆಚ್ಚಿರುವ ಹಾಗೂ ಪ್ರಮುಖ ವಿದ್ಯಾಸಂಸ್ಥೆಗಳಿರುವ ಕೋಟ ಮೂರ್ಕೈಯಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣವಾಗಬೇಕು ಎನ್ನುವ ಬೇಡಿಕೆ ಸಾರ್ವಜನಿಕ ವಲಯದಲ್ಲಿ  ಕೇಳಿಬಂದಿದ್ದು,  ಈ ಬಗ್ಗೆ ಇಂದು(ಜೂ. 23, ಬುಧವಾರ)  ಉದಯವಾಣಿ ವಿಸ್ಕೃತ ವರದಿ ಪ್ರಕಟಿಸಿತ್ತು. ಈ ಬೆನ್ನಿಗೆ ಇದೀಗ  ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕೂಡ  ಮೇಲ್ಸೇತುವೆಗೆ ಕ್ರಮಕೈಗೊಳ್ಳುವಂತೆ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

Advertisement

ಇದನ್ನೂ ಓದಿ : ಉತ್ತರ ಪ್ರದೇಶದ ಕಾಂಗ್ರೆಸ್ ಗೆ ಪ್ರಿಯಾಂಕ ಅವರದ್ಧೇ ನೇತೃತ್ವ : ಸಲ್ಮಾನ್‌ ಖುರ್ಷಿದ್‌

ಇಲ್ಲಿನ ವಿವೇಕ ವಿದ್ಯಾಸಂಸ್ಥೆಯಲ್ಲಿ ಮೂರು ಸಾವಿರಕ್ಕೂ  ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾರೆ ಮತ್ತು ಸಾಕಷ್ಟು ಶಿಕ್ಷಕರು, ಸಿಬಂದಿಗಳು, ಸಾರ್ವಜನಿಕರು ಇಲ್ಲಿ ರಸ್ತೆ ದಾಟುತ್ತಾರೆ. ಈ ಪ್ರದೇಶದಲ್ಲಿ  ಆಗಾಗ ವಾಹನ ಅಪಘಾತಗಳು ಸಂಭವಿಸಿದ ಉದಾಹರಣೆಗಳು ಕೂಡ  ಇದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಇಲ್ಲಿಗೆ ಪಾದಚಾರಿ ಮೇಲ್ಸೇತುವೆ ಅಗತ್ಯವಿದ್ದು,  ಈ ಬಗ್ಗೆ  ಕ್ರಮಕೈಗೊಳ್ಳಬೇಕು ಎಂದು ವಿವೇಕ ವಿದ್ಯಾಸಂಸ್ಥೆಯವರು ನೀಡಿದ ಮನವಿಯನ್ನು ಉಲ್ಲೇಖಿಸಿ ಸಂಸದರಿಗೆ ಪತ್ರ ಮೂಲಕ ವಿನಂತಿಸಿದ್ದಾರೆ.

ಇದನ್ನೂ ಓದಿ : ವ್ಯಾಕ್ಸಿನ್ ನೆರವಿಗಾಗಿ ನನ್ನನ್ನು ಸಂಪರ್ಕಿಸಿ : ಕೆಪಿಸಿಸಿಅಧ್ಯಕ್ಷಡಿ.ಕೆ.ಶಿವಕುಮಾರ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next