Advertisement

ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೇಸ್, ಈಗ ಪಾದಯಾತ್ರೆಯ ನಾಟಕವಾಡುತ್ತಿದೆ: ಹಾಲಪ್ಪ ಆಚಾರ್

12:16 PM Jan 11, 2022 | Team Udayavani |

ರಾಯಚೂರು : ತಮ್ಮ ಅಧಿಕಾರವಧಿಯಲ್ಲಿ ಏನು ಮಾಡದೆ ಕಾಂಗ್ರೆಸ್ ನವರು ಈಗ ಅಧಿಕಾರಕ್ಕಾಗಿ ಮೇಕೆದಾಟು ಪಾದಯಾತ್ರೆ ನಾಟಕ ಶುರು ಮಾಡಿಕೊಂಡಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಟೀಕಿಸಿದರು.

Advertisement

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದಲ್ಲಿ ಕಾಂಗ್ರೆಸ್ ನವರು ಆಡಿದ ನಾಟಕ ಬಯಲಾಗಿದೆ. ಈಗ ಅಲ್ಲಿ ಶುರು ಮಾಡಿಕೊಂಡಿದ್ದಾರೆ.
ಹಿಂದೆ ಕೂಡಲಸಂಗಮದಲ್ಲಿ ಕಾಂಗ್ರೆಸ್ ನಡೆ ಕೃಷ್ಣೆ ಕಡೆ ಎಂಬ ಯಾತ್ರೆ ನಡೆಸಿದ್ದರು. ಕೃಷ್ಣ ಭಾಗದ ನೀರಾವರಿ ಯೋಜನೆಗಳಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರು.

ಆದರೆ, ಐದು ವರ್ಷದಲ್ಲಿ ಕೇವಲ 7,500 ಕೋಟಿ ರೂ. ಮಾತ್ರ ನೀಡಿದ್ದರು. ಅವರು ಮಾಡಿದ ಯಡವಟ್ಟಿನಿಂದ ಎಲ್ಲ ಯೋಜನೆಗಳಿಗೆ ಗ್ರಹಣ ಹಿಡಿದಿದೆ‌. ಈ ಭಾಗದಲ್ಲಿ ಅವರ ನಾಟಕ ಬಯಲಾಗಿದೆ. ಈಗ ಆ ಭಾಗದಲ್ಲಿ ಶುರು ಮಾಡಿಕೊಂಡಿದ್ದಾರೆ. ತಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಯೋಜನೆ ಜಾರಿ ಮಾಡದೆ ಯಾಕೆ ಸುಮ್ಮನೆ ಕುಳಿತಿದ್ದರು ಎಂದು ಪ್ರಶ್ನಿಸಿದ ಅವರು, ಎಲ್ಲ ಯೋಜನೆಗಳು ಜಾರಿಯಾಗಬೇಕು ಎಂಬುದು ಬಿಜೆಪಿ ಆಶಯವಾಗಿದೆ ಎಂದರು.

ಇದನ್ನೂ ಓದಿ : ಡಿಕೆಶಿ ವಿರುದ್ಧ ಕ್ರಮ ತೆಗೆದುಕೊಳ್ಳಿ: ಡಿಜಿಪಿಗೆ ಮಕ್ಕಳ ಆಯೋಗದ ಪತ್ರ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next