Advertisement

ಹಾಲಾಡಿ ಇಂದು ಬಿಜೆಪಿಗೆ

12:04 PM Feb 02, 2018 | |

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಗೆದ್ದು, ಈಗ ಪಕ್ಷೇತರ ಶಾಸಕರಾಗಿ ರಾಜೀನಾಮೆ ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಮಾತೃಪಕ್ಷ ಬಿಜೆಪಿಗೆ ಫೆ. 2ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ.

Advertisement

ಅವರು 1999, 2004, 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹ್ಯಾಟ್ರಿಕ್‌ ಜಯ ಸಾಧಿಸಿದ್ದರು. ಬಳಿಕ 2013ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಭರ್ಜರಿಯಾಗಿ ಗೆದ್ದಿದ್ದರು. ಈಗ ಅವಧಿಗೆ ಮುನ್ನವೇ ಪಕ್ಷೇತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಹಿಂದಿನ ಮುನಿಸು ಮರೆತು ಸ್ಥಳೀಯ ನಾಯಕರ ವಿರೋಧದ ನಡುವೆಯೇ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ.

ಹಾಲಾಡಿಯವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಕುಂದಾಪುರ ಕ್ಷೇತ್ರ ಬಿಜೆಪಿಯ ಸುಮಾರು 400ರಿಂದ 500 ಮಂದಿ ಕಾರ್ಯಕರ್ತರು ಈಗಾಗಲೇ ಬೆಂಗಳೂರಿನತ್ತ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ರಣತಂತ್ರ ರೂಪಿಸು ತ್ತಿರುವ ಬಿಜೆಪಿಗೆ ಪ್ರಭಾವಿ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಸೇರ್ಪಡೆಯೊಂದಿಗೆ ಮತ್ತಷ್ಟು ಬಲ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next