Advertisement

ಹಳೆಯಂಗಡಿ ಜಂಕ್ಷನ್‌ನಲ್ಲಿ ಅಪಘಾತ; ಗ್ರಾಫಿಕ್‌ ಡಿಸೈನರ್‌ ಸಾವು

12:54 AM Sep 14, 2022 | Team Udayavani |

ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಮುಖ್ಯ ಜಂಕ್ಷನ್‌ನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ. ಪಕ್ಷಿಕೆರೆ ಹೊಸಕಾಡು ನಿವಾಸಿ ಚರಣ್‌ರಾಜ್‌ ಶೆಟ್ಟಿಗಾರ್‌ (28) ಮೃತರು.

Advertisement

ಮಂಗಳೂರಿನಿಂದ ಉಡುಪಿಯತ್ತ ಸಂಚರಿಸುತ್ತಿದ್ದ ಟ್ಯಾಂಕರ್‌ನ ಚಕ್ರಕ್ಕೆ ಮುಖ್ಯಜಂಕ್ಷನ್‌ನ ಬ್ಯಾರಿಕೇಡ್‌ ಬಳಿಯಲ್ಲಿ ಸಿಲುಕಿದ ಚರಣ್‌ರಾಜ್‌ ಅವರ ಬೈಕ್‌ ಅನ್ನು ಸುಮಾರು ದೂರದವರೆಗೆ ಟ್ಯಾಂಕರ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭ ತಲೆಯು ರಸ್ತೆಗೆ ಅಪ್ಪಳಿಸಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ತತ್‌ಕ್ಷಣ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಚರಣ್‌ರಾಜ್‌ ಸುರತ್ಕಲ್‌ನಲ್ಲಿ ಗ್ರಾಫಿಕ್‌ ಡಿಸೈನರ್‌ ಆಗಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು.

ವರ್ಷದ ಹಿಂದೆ ಮದುವೆ: 1 ವರ್ಷದ ಹಿಂದೆಯಷ್ಟೇ ಅವರ ವಿವಾಹವಾಗಿತ್ತು. ಮಂಗಳೂರು ಉತ್ತರ ವಲಯದ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next