Advertisement
ನಗರದ ಪ್ರಮುಖ ಕೇಂದ್ರವಾದ ಕೊಟ್ಟಾರವನ್ನು ಸಂಪರ್ಕಿಸಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಕೊಟ್ಟಾರ ಕ್ರಾಸ್ ಸಂಪರ್ಕ ಇರುವ ಈ ರಸ್ತೆಯಲ್ಲಿ ದಡ್ಡಲಕಾಡು ಸಮೀಪ ಇತ್ತೀಚೆಗೆ ನೀರು ಸರಬರಾಜು ಪೈಪ್ಲೈನ್ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಗೆ ಸಂಬಂಧಿಸಿ ಕೆಲವು ದಿನಗಳವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಸ್ಥಳೀಯ ನಿವಾಸಿ ರಮೇಶ್ ಕುಮಾರ್ “ಸುದಿನ’ಕ್ಕೆ ಪ್ರತಿಕ್ರಿಯಿಸಿ, ಮೇ ಕೊನೆಯ ವೇಳೆ ಮಳೆಗಾಲ ಆರಂಭವಾಗಲಿದ್ದು, ಅದಕ್ಕೂ ಮುನ್ನ ರಸ್ತೆ ಸರಿಪಡಿಸಬೇಕು. ಸದ್ಯ ಮಣ್ಣಿನ ರಸ್ತೆಯಿದ್ದು, ಪೂರ್ತಿ ಧೂಳಿನಿಂದ ಕೂಡಿದೆ. ಒಂದು ಮಳೆ ಬಂದರೆ ಈ ರಸ್ತೆಯಲ್ಲಿ ಜನರು ಕೂಡ ಓಡಾಡುವುದು ಕಷ್ಟವಾಗಬಹುದು. ಸ್ಥಳೀಯಾಡಳಿತ ಈ ಬಗ್ಗೆ ಕೂಡಲೇ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.
Related Articles
ನಗರದ ಅನೇಕ ಕಡೆಗಳಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ದಡ್ಡಲಕಾಡು ಪ್ರದೇಶದಲ್ಲಿ ಕೆಲವೊಂದು ಕಾಮಗಾರಿ ಬಾಕಿ ಇವೆ ಎಂಬ ಉದ್ದೇಶದಿಂದ ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಇದ್ದಿರಬಹುದು. ಈ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ ಬಳಿ ಮಾತುಕತೆ ನಡೆಸಿ, ವಾಸ್ತವಾಂಶವನ್ನು ಪಡೆದುಕೊಳ್ಳುತ್ತೇನೆ.
- ನಾರಾಯಣಪ್ಪ, ಪಾಲಿಕೆ ಆಯುಕ್ತ (ಪ್ರಭಾರ)
Advertisement