Advertisement

ಅಪ್ಪು ನಮ್ಮನ್ನಗಲಿ 5 ದಿನ : ಇಂದು ಕುಟುಂಬಸ್ಥರಿಂದ ಹಾಲು-ತುಪ್ಪ ಬಿಡುವ ಕಾರ್ಯ

08:28 AM Nov 02, 2021 | Team Udayavani |

ಬೆಂಗಳೂರು: ಕಳೆದ ಶುಕ್ರವಾರ (ಅಕ್ಟೋಬರ್ 29) ಕರ್ನಾಟಕದ ಪ್ರೀತಿಯ ಅಪ್ಪು, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದು,  ಇಂದಿಗೆ ಐದು ದಿನ ಕಳೆದಿದೆ. ಈ ಹಿನ್ನಲೆಯಲ್ಲಿ ಅಪ್ಪು ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಕುಟುಂಬಸ್ಥರಿಂದ ಹಾಲು-ತುಪ್ಪ ಬಿಡುವ ಕಾರ್ಯವನ್ನು ಇಂದು ನಡೆಯಲಿದೆ.

Advertisement

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಭಾನುವಾರ ಮುಂಜಾನೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು.

ಅಪ್ಪು ಸಮಾಧಿ ಸ್ಥಳ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಮಾಧಿ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ದಿವಂಗತ ನಟ ಪುನೀತ್ ರಾಜ್​​ಕುಮಾರ್ ಫೋಟೋ ಇಟ್ಟು ಸ್ಟೇಜ್‌ ಕೂಡ ಸಿದ್ಧತೆ ಮಾಡಲಾಗಿದೆ.

ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಕಟ್ಟೆಚ್ಚರ ವಹಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಬ್ಯಾರಿಕೇಡ್‌ ಹಾಕಿ ಎಸಿಪಿ, ಇನ್ಸ್‌ಪೆಕ್ಟರ್‌, ಸಬ್‌ಇನ್ಸ್‌ಪೆಕ್ಟರ್‌, 1 KSRP ತುಕಡಿ ಸೇರಿ 150ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next