Advertisement

ನಾಡಗೀತೆಯ ಮೊದಲ, ಕೊನೆಯ ಚರಣ ಹಾಡಿದರೆ ಪರಿಣಾಮಕಾರಿ: ಹಂಪನಾ

10:13 PM Dec 15, 2022 | Team Udayavani |

ತುಮಕೂರು: ನಾಡಗೀತೆಯ ಮೊದಲ ಹಾಗೂ ಕೊನೆಯ ಚರಣ ಹಾಡಿದರೆ ಬಹಳ ಪರಿಣಾಮಕಾರಿಯಾಗಿರುತ್ತದೆ ಎಂದು ಹಿರಿಯ ಸಾಹಿತಿ ಡಾ| ಹಂ.ಪ.ನಾಗರಾಜಯ್ಯ ಸರಕಾರಕ್ಕೆ ಸಲಹೆ ನೀಡಿದರು.

Advertisement

ನಗರದ ಗಾಜಿನಮನೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗುರುವಾರ ಏರ್ಪಡಿಸಿದ್ದ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕುವೆಂಪು ಅವರು ಬರೆದಿರುವ ನಾಡಗೀತೆ ಅತ್ಯಂತ ಸುಂದರ. ಹಲವು ಸಾಲುಗಳು ಇರುವುದರಿಂದ ಹಾಡಲು ತುಂಬಾ ಸಮಯ ಬೇಕಾಗುತ್ತದೆ. ನಾಡಗೀತೆಯ ಮೊದಲ ಪಲ್ಲವಿಯ ಜತೆಗೆ, ಸರ್ವಜನಾಂಗ ಶಾಂತಿಯ ತೋಟ ಎಂಬ ಕೊನೆಯ ಚರಣವನ್ನಷ್ಟೇ ಹಾಡಿದರೆ ಹೆಚ್ಚು ಅರ್ಥಗರ್ಭಿತ ಹಾಗೂ ಸಮಯವೂ ಉಳಿತಾಯವಾಗುತ್ತದೆ ಎಂದರು.

ನಾನು ಹತ್ತಾರು ದೇಶಗಳ ಸಾಹಿತ್ಯ ಸಮ್ಮೇಳನಗಳಲ್ಲಿ ಪಾಲ್ಗೊಂಡಿದ್ದೇನೆ. ಅಲ್ಲಿ ತಮ್ಮ ನಾಡಗೀತೆಯನ್ನು ಅತಿ ಕಡಿಮೆ ಸಮಯದಲ್ಲಿ ಮುಗಿಸುತ್ತಾರೆ. ಹೇಗೆ ನಮ್ಮ ರಾಷ್ಟ್ರಗೀತೆ 52 ಸೆಕೆಂಡ್‌ಗಳಲ್ಲಿ ಮುಗಿಯುತ್ತದೆಯೋ ಅದೇ ರೀತಿ ನಾಡಗೀತೆಯನ್ನು 52 ಸೆಕೆಂಡ್‌ಗಳಿಗೆ ಸೀಮಿತಗೊಳಿಸಿದರೆ ಹೆಚ್ಚು ಅನುಕೂಲ ಎಂಬುದು ನನ್ನ ಅಭಿಪ್ರಾಯ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next