Advertisement

ಜನವರಿಯಲ್ಲಿ ಹಂಪಿ-ಆನೆಗೊಂದಿ ಉತ್ಸವ: ಸಚಿವ ಆನಂದ ಸಿಂಗ್‌

07:40 PM Nov 01, 2022 | Team Udayavani |

ಕೊಪ್ಪಳ: ಜನವರಿಯಲ್ಲಿ ಹಂಪಿ, ಆನೆಗೊಂದಿ ಉತ್ಸವ ಎರಡನ್ನೂ ಮಾಡಲಿದ್ದೇವೆ ಎಂದು ಉಸ್ತುವಾರಿ ಸಚಿವ ಆನಂದ ಸಿಂಗ್‌ ಹೇಳಿದರು.

Advertisement

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಂಪಿ-ಆನೆಗೊಂದಿ ಒಂದಕ್ಕೊಂದು ಸಂಬಂಧವಿದೆ. ಎರಡೂ ಕಡೆ ಉತ್ಸವ ಮಾಡುವ ಚಿಂತನೆಯಲ್ಲಿದ್ದೇವೆ. ಈ ಹಿಂದೆ ಹಂಪಿ ಉತ್ಸವ ಸಂಭ್ರಮದಿಂದ ಮಾಡಿದ್ದೇವೆ.

ಕೋವಿಡ್‌ ಹಿನ್ನೆಲೆಯಲ್ಲಿ ಉತ್ಸವ ಆಚರಿಸಲು ಸಾಧ್ಯವಾಗಲಿಲ್ಲ. ನವೆಂಬರ್‌ನಲ್ಲಿ ಉತ್ಸವ ಆಚರಣೆ ಮಾಡಬೇಕಿತ್ತು. ಆದರೆ ಸಾಧ್ಯವಾಗಿಲ್ಲ. ಜನವರಿಯಲ್ಲಿ ಎರಡೂ ಉತ್ಸವಗಳನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next