ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಈ ವರ್ಷ ಉತ್ಸವ ಮುಂದೂಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಯೋಜನೆ ಮುಂದೂಡಲು ತೀರ್ಮಾನಿಸಲಾಗಿತ್ತು. ಆದರೆ, ಸ್ಥಳೀಯ ಕಲಾವಿದರು ಹಾಗೂ ಬಳ್ಳಾರಿ ನೂತನ ಸಂಸದ ವಿ.ಎಸ್. ಉಗ್ರಪ್ಪ ಹಂಪಿ ಉತ್ಸವ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ದಿನವಾದರೂ ಆಚರಿಸುವ ಸಾಧ್ಯತೆ
ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
Advertisement
ಉತ್ಸವ ಮಾಡುವುದೆಂದರೆ ಅಷ್ಟು ಸುಲಭವಲ್ಲ. ಅದಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಬರ ಪರಿಹಾರ ಕಾಮಗಾರಿಯಲ್ಲಿ ಹೆಚ್ಚು ತೊಡಗಿಕೊಳ್ಳುವುದರಿಂದ ಉತ್ಸವ ಆಚರಣೆಯಲ್ಲಿ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಉತ್ಸವ ಆಚರಣೆ ಮಾಡುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.