Advertisement

ರೈಲು ವಿಳಂಬ : ಛೇ…600 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ NEET ಪರೀಕ್ಷೆ ಮಿಸ್‌

09:21 AM May 06, 2019 | Team Udayavani |

ಬೆಂಗಳೂರು: ಹಂಪಿ ಎಕ್ಸ್‌ಪ್ರೆಸ್‌ ರೈಲು ವಿಳಂಬವಾದ ಹಿನ್ನಲೆಯಲ್ಲಿ 600ಕ್ಕೂ ಹೆಚ್ಚು ಮಂದಿ ನೀಟ್‌ ಪರೀಕ್ಷಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

Advertisement

ಬಳ್ಳಾರಿ, ಕೊಪ್ಪಳ ಸೇರಿ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ರೈಲಿನಲ್ಲಿ ಆಗಮಿಸುತ್ತಿದ್ದರು. ಭಾನುವಾರ ಬೆಳಗ್ಗೆ 6 ಗಂಟೆಗೆ ತಲುಪಬೇಕಾದ ರೈಲು 9 ಗಂಟೆ ವಿಳಂಬವಾಗಿ ಅಂದರೆ ಪರೀಕ್ಷೆ ಆರಂಭವಾಗಿ 1 ಗಂಟೆಯ ನಂತರ ಮೆಜೆಸ್ಟಿಕ್‌ ನಿಲ್ದಾಣವನ್ನು ತಲುಪಿದೆ.

ವಿದ್ಯಾರ್ಥಿಗಳು ಕಂಗಾಲಾಗಿದ್ದು, ಭವಿಷ್ಯದ ಬಗ್ಗೆ ಯೋಚಿಸತೊಡಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ನಮಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಸರ್ಕಾರವನ್ನುಕೇಳಿಕೊಂಡಿದ್ದಾರೆ.

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ನಾನು ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ಕೇಂದ್ರ ಸರ್ಕಾರದ ವತಿಯಿಂದ ನಡೆಯುವ ಪರೀಕ್ಷೆ ಇದಾಗಿದ್ದು, ನಾವು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ.ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಲು ಎಲ್ಲಾ ಯತ್ನಗಳನ್ನುಮಾಡುತ್ತಿದ್ದೇವೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next