Advertisement

ಹಂಪಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ; 3 ಲಾರಿ ವಶ

08:48 PM Sep 18, 2020 | mahesh |

ಗಂಗಾವತಿ: ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಮಲ್ಲಾಪೂರ ರಾಂಪೂರ ಸುತ್ತಲಿನ ಡಿಮ್ಡ್ ಅರಣ್ಯ ಪ್ರದೇಶದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು ಶುಕ್ರವಾರ ಜಿಲ್ಲಾಡಳಿತದ ಸೂಚನೆ ಮೇರೆಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಮಲ್ಲಾಪೂರ ಗ್ರಾಮದ ಎರಡು ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಗೆ ಕಲ್ಲುಕಂಬ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ವಶ ಪಡೆದು‌ ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement

ಕಳೆದ ಬುಧವಾರ ಉದಯವಾಣಿ ಪತ್ರಿಕೆಯಲ್ಲಿ ಹಂಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಕುರಿತು ವಿಸ್ತ್ರತ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ್ದ ಜಿಲ್ಲಾಡಳಿತ ಸಂಬಂಧಿಸಿದ ಅಧಿಕಾರಿಗಳಿಗೆ ಅಕ್ರಮ ತಡೆಯುವಂತೆ ಸೂಚನೆ ನೀಡಿದ್ದರಿಂದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಧನಂಜಯ್.ಸುರೇಂದ್ರ ಪಿಎಸ್ ಐ ಜೆ.ದೊಡ್ಡಪ್ಪ, ಕಂದಾಯ ಇಲಾಖೆಯ ಮಂಜುನಾಥ ಸ್ವಾಮಿ, ಮಹಾಲಕ್ಷ್ಮಿ ಸೇರಿ ಇತರೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next