Advertisement

ಕೃಷ್ಣಪ್ಪ, ಷಡಕ್ಷರಿ, ಡಾ|ಮಂಜುನಾಥ್‌ಗೆ ನಾಡೋಜ ಪ್ರದಾನ

09:15 PM Dec 08, 2022 | Team Udayavani |

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯ 31ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಮೂವರು ಸಾಧಕರಿಗೆ ಪ್ರತಿಷ್ಠಿತ ನಾಡೋಜ ಗೌರವ ಪದವಿ ಪ್ರದಾನ ಮಾಡಿದರು.

Advertisement

ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಗುರುವಾರ ಸಂಜೆ ಜರುಗಿದ ಘಟಕೋತ್ಸವದ ಸಮಾರಂಭದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಕೃಷ್ಣಪ್ಪ ಜಿ., ಎಸ್‌.ಷಡಕ್ಷರಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ|ಸಿ.ಎನ್‌. ಮಂಜುನಾಥ ಅವರಿಗೆ ನಾಡೋಜ ಪದವಿ ಪ್ರದಾನ ಮಾಡಿದರು.

1 ಡಿ.ಲಿಟ್‌ ಪದವಿ, 136 ಪಿಎಚ್‌ಡಿ ಪದವಿ, 23 ಎಂಫಿಲ್‌ ಪದವಿ, 35 ಎಂಎಂಪಿಎಚ್‌ಡಿ (ಕನ್ನಡ ಸಾಹಿತ್ಯ) ಸಂಯೋಜಿತ ಸೇರಿದಂತೆ ಒಟ್ಟು 321 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

 

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next